Featured

ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ – Vishwanews24

ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ

ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಜೈಲಿನಲ್ಲಿಟ್ಟ ಮಹಿಳಾ ಪೊಲಿಸ್ ಅಧಿಕಾರಿಗಳಿಬ್ಬರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ತಮ್ಮ ಜೇಬಿನಿಂದಲೇ ನೀಡಬೇಕೆಂದು ಎರಡನೇ ಹೆಚ್ಚುವರಿ ಎಫ್‌ಟಿಎಸ್‌ಸಿ ಪೋಕ್ಸೋ ನ್ಯಾಯಾಲಯ ಆದೇಶ ನೀಡಿದೆ.

ಮಂಗಳೂರು ಮಹಿಳಾ ಪೊಲೀಸ್‌ ಠಾಣಾ ನಿರೀಕ್ಷಕರಾದ ರೇವತಿ ಮತ್ತು ಉಪನಿರೀಕ್ಷಕರಾದ ರೋಸಮ್ಮ ಪಿ ಪಿ ಅವರು ಆರೋಪಿ ನವೀನ್‌ ಸಿಕ್ವೇರ ಅವರಿಗೆ 5,00,000 ರೂ. ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಇಬ್ಬರು ಪೊಲೀಸ್‌ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೂ ಆದೇಶಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಎಂಬ ಆರೋಪಿಯನ್ನು ಬಂಧಿಸುವ ಬದಲು ಪೊಲೀಸರು ನವೀನ್ ಸಿಕ್ವೇರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಆದರೆ ನೊಂದ ಬಾಲಕಿ ತನ್ನ ಫಿರ್ಯಾದಿಯಲ್ಲಿ ಮತ್ತು ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ, ಕೇವಲ ನವೀನ್‌ ಎಂಬ ಆರೋಪಿಯ ಹೆಸರನ್ನು ಉಲ್ಲೇಖೀಸಿದ್ದಳು.ನವೀನ್‌ ಸಿಕ್ವೇರನನ್ನೇ ಆರೋಪಿಯನ್ನಾಗಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಆರೋಪಿ ಪರ ವಕೀಲರಾದ ರಾಜೇಶ್‌ಕುಮಾರ್‌ ಮತ್ತು ಗಿರೀಶ್‌ ಶೆಟ್ಟಿ ಅವರು ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು, ನವೀನ್‌ ಸಿಕ್ವೇರ ನಿರಪರಾಧಿ ಎಂದು ಖುಲಾಸೆ ಗೊಳಿಸಿದ್ದಾರೆ. ಅಲ್ಲದೆ ಪೊಲೀಸ್‌ ಅಧಿಕಾರಿಗಳು ನಿಜವಾದ ವ್ಯಕ್ತಿಯನ್ನು ಬಂಧಿಸದೆ, ನವೀನ್‌ ಸಿಕ್ವೇರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಕ್ಕೆ 5 ಲ.ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago