Featured

ಪೋಕ್ಸೋ ಪ್ರಕರಣ : ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ – vishwanews24

ಪೋಕ್ಸೋ ಪ್ರಕರಣ : ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದ್ದು ಹೀಗಾಗಿ ಬಂಧನ ಭೀತಿ ಎದುರಾಗಿದೆ.

ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ವಾರಂಟ್ ಹೊರಡಿಸಲು ಪೊಲೀಸರು ಜೂ.12 ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಇದೀಗ ನ್ಯಾಯಾಲಯ ವಾರಂಟ್​ ಜಾರಿ ಮಾಡಿದೆಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಅತ್ಯಾಚಾರ ಸಂತ್ರಸ್ತ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಾಯಿ ಕಾನೂನಾತ್ಮಕ ನೆರವು ಕೇಳಲು ಹೋಗಿದ್ದರು. ಈ ವೇಳೆ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌ವೈ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಕಳೆದ ಮಾರ್ಚ್ ತಿಂಗಳಲ್ಲೇ ಮಹಿಳೆ ದೂರು ನೀಡಿದ್ದರು. ಆದರೆ, ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಐಡಿ ತನಿಖೆಗೆ ವಹಿಸಲಾಗಿತ್ತು.

ಆದರೆ, ಪ್ರಕರಣ ವಿಚಾರಣೆಗೆ ನೊಟೀಸ್ ಜಾರಿ ಮಾಡಲಾಗಿತ್ತು. ಆದರೆ, ಎರಡು ಬಾರಿ ನೊಟೀಸ್ ನೀಡಿದರೂ ಹಾಜರಾಗದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಯಡಿಯೂರಪ್ಪ ಬಂಧನಕ್ಕೆ ಅವಕಾಶ ನೀಡಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿ ಎಸ್ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago