Featured

ಪೋಕ್ಸೋ ಪ್ರಕರಣ : ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್ – vishwanews24

ಪೋಕ್ಸೋ ಪ್ರಕರಣ : ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ಸಮಾಧಾನ ಸಿಕ್ಕಿದೆ. ಬಿಎಸ್ ಯಡಿಯೂರಪ್ಪ ಅವರನ್ನು ಸದ್ಯ ಬಂಧನ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ.

ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆಯವರೆಗೆ ಅವರನ್ನು ಬಂಧಿಸುವಂತಿಲ್ಲ ಎಂದಿದೆ.

ಬಿಎಸ್ ಯಡಿಯೂರಪ್ಪ ಅವರು ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವುದು ಬೇಡ ಎಂದು ಉಚ್ಛ ನ್ಯಾಯಾಲಯದ ಪೀಠ ಹೇಳಿದೆ.

ಬಿ.ಎಸ್‌.ಯಡಿಯೂರಪ್ಪ ಅವರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್‌ ಅವರು ವಾದ ಮಂಡಿಸಿದರು. “ಪೋಕ್ಸೊ ಕೇಸ್‌ಗೆ ಸಂಬಂಧಿಸಿದಂತೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ. ಒಂದು ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ಇನ್ನೊಂದು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ದೂರುದಾರೆಗೆ ಬ್ಲ್ಯಾಕ್‌ಮೇಲ್‌ ಮಾಡುವುದೇ ಕೆಲಸವಾಗಿದೆ. ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ. ಆಕೆಯ ವೃತ್ತಿಯೇ ಬೇರೆಯವರ ವಿರುದ್ಧ ಕೇಸ್‌ ದಾಖಲಿಸುವುದಾಗಿದೆ. ಇದುವರೆಗೆ ಮಹಿಳೆಯು ಸುಮಾರು 53 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಲ್ಲಿ ಭಾವನಾತ್ಮಕ ಅಂಶಗಳಿಗಿಂತ ವಾಸ್ತವಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ” ಎಂದು ಹೇಳಿದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

51 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago