ಬೆಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ಸಮಾಧಾನ ಸಿಕ್ಕಿದೆ. ಬಿಎಸ್ ಯಡಿಯೂರಪ್ಪ ಅವರನ್ನು ಸದ್ಯ ಬಂಧನ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆಯವರೆಗೆ ಅವರನ್ನು ಬಂಧಿಸುವಂತಿಲ್ಲ ಎಂದಿದೆ.
ಬಿಎಸ್ ಯಡಿಯೂರಪ್ಪ ಅವರು ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವುದು ಬೇಡ ಎಂದು ಉಚ್ಛ ನ್ಯಾಯಾಲಯದ ಪೀಠ ಹೇಳಿದೆ.
ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಂಡಿಸಿದರು. “ಪೋಕ್ಸೊ ಕೇಸ್ಗೆ ಸಂಬಂಧಿಸಿದಂತೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ. ಒಂದು ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ಇನ್ನೊಂದು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ದೂರುದಾರೆಗೆ ಬ್ಲ್ಯಾಕ್ಮೇಲ್ ಮಾಡುವುದೇ ಕೆಲಸವಾಗಿದೆ. ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ. ಆಕೆಯ ವೃತ್ತಿಯೇ ಬೇರೆಯವರ ವಿರುದ್ಧ ಕೇಸ್ ದಾಖಲಿಸುವುದಾಗಿದೆ. ಇದುವರೆಗೆ ಮಹಿಳೆಯು ಸುಮಾರು 53 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಲ್ಲಿ ಭಾವನಾತ್ಮಕ ಅಂಶಗಳಿಗಿಂತ ವಾಸ್ತವಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ” ಎಂದು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…