ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಗುರುವಾರ ವಿಶ್ವದ ಎಲ್ಲಾ ನೂತನ ಬಿಷಪ್ ಗಳನ್ನು ಭೇಟಿಯಾದ ಪೋಪ್ ಲಿಯೋ ಅವರು ಬಳಿಕ ಪ್ರತ್ಯೇಕವಾಗಿ ಪ್ರತಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಲೆಸ್ಲಿ ಅವರು ಧರ್ಮಪ್ರಾಂತ್ಯದ ಪರವಾಗಿ ಪೋಪ್ ಅವರನ್ನು ಶಾಲು ಹಾಗೂ ಧರ್ಮಪ್ರಾಂತ್ಯದ ಪಾಲಕಿಯಾದ ಮಿಲಾಗ್ರಿಸ್ ಮಾತೆಯ ಪ್ರತಿಮೆಯೊಂದಿಗೆ ಗೌರವಿಸಿ ಉಡುಪಿ ಜಿಲ್ಲೆಯ ಪರವಾಗಿ ಶುಭಾಶಯಗಳನ್ನು ಕೋರಿದರು. ಉಡುಪಿ ಧರ್ಮಪ್ರಾಂತ್ಯದ ಕುರಿತು ಮಾಹಿತಿಯನ್ನು ಪೋಪ್ ಅವರಿಗೆ ಬಿಷಪ್ ಲೆಸ್ಲಿ ನೀಡಿದರು.
ಉಡುಪಿ ಹಾಗೂ ಭಾರತದ ಧರ್ಮಸಭೆಗೆ ತಮ್ಮ ಆಶೀರ್ವಾದವನ್ನು ತಿಳಿಸಿದ ಪೋಪ್ ಅವರಿಗೆ ಬಿಷಪ್ ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಪವಿತ್ರ ಧರ್ಮಸಭೆ ಹಾಗೂ ಪೋಪ್ ಲಿಯೋ ಅವರಿಗೆ ಉಡುಪಿ ಧರ್ಮಪ್ರಾಂತ್ಯದ ಕ್ರೈಸ್ತ ವಿಶ್ವಾಸಿಗಳ ಪರವಾಗಿ ಪ್ರಾರ್ಥನೆಯ ಭರವಸೆಯನ್ನು ನೀಡಿದರು.
ಬಿಜೆಪಿ ಕಾಂಗ್ರೆಸ್ ಪಾರ್ಟಿನ ಟ್ರ್ಯಾಪ್ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ .. ಬಿಜೆಪಿಯವರ ಮೇಲೆಲ್ಲೂ ಕೂಡ ED ದಾಳಿ ಮಾಡುತ್ತಿಲ್ಲ ವಂದೇ ಮಾತರಂ…
ಮಹಾರಾಷ್ಟ್ರ : ಟ್ರಕ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ; ಮೂವರು ಮಕ್ಕಳು ಸೇರಿ 8 ಮಂದಿ ದುರ್ಮರಣ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು…
ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ ಉಡುಪಿ : ಟೌನ್ ಹಾಲ್ನಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ…
ಬೆಳ್ತಂಗಡಿ : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ…
ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಗುಡ್ನ್ಯೂಸ್ .. ಇನ್ಮುಂದೆ ವಾಟ್ಸಾಪ್ ಮೂಲಕ ಟಿಕೆಟ್ ಬುಕ್ಕಿಂಗ್ಗೆ ಅವಕಾಶ .. ವಾಟ್ಸಾಪ್ನಲ್ಲಿ ಟಿಕೆಟ್ ಬುಕಿಂಗ್ ಮಾಡುವುದು ಹೇಗೆ?…