ಕಾಸರಗೋಡು : ಚಿಕ್ಕಂದಿನಿಂದಲೇ ಪೋಷಕರನ್ನು ಕಳೆದು ಅನಾಥವಾಗಿದ್ದ ಹಿಂದೂ ಬಾಲಕಿಗೆ ತಮ್ಮ ಮಗಳಂತೆ ಸಾಕಿ ಸಲಹಿದವರು ಕೆ.ಅಬ್ದುಲ್ಲಾ – ಖದೀಜಾ ದಂಪತಿ . ಕೊನೆಗೂ ತಮ್ಮ ಸ್ವಂತ ಮಗಳಂತೆ ವಿವಾಹವನ್ನು ಹಿಂದೂ ಯುವಕನ ಜೊತೆಯೇ ನೆರವೇರಿಸಿಕೊಡುವ ಮೂಲಕ ಸೌಹಾರ್ಧತೆಯ ಸಂದೇಶವನ್ನು ತೋರಿಸಿಕೊಟ್ಟಿದ್ದಾರೆ.
ಹನ್ನೆರಡು ವರ್ಷಗಳ ಹಿಂದೆ, ತನ್ನ ಹತ್ತನೇ ವಯಸ್ಸಿನಲ್ಲಿ ಹೆತ್ತವರನ್ನು ಕಳೆದುಕೊಂಡು ಅನಾಥಳಾದ ರಾಜೇಶ್ವರಿ ಯನ್ನು ಮಗಳಾಗಿ ಸ್ವೀಕರಿಸಿದ ಎ.ಅಬ್ದುಲ್ಲಾ ಮತ್ತು ಕದೀಜಾ ತಮ್ಮ ಸ್ವಂತ ಮಗಳಂತೆ ಸಾಕಿ,ಸಲಹಿ, ಸಕಲ ಖರ್ಚುಗಳನ್ನೂ ತಾವೇ ಭರಿಸಿ ಅವಳನ್ನು ಯೋಗ್ಯ ವರನಿಗೆ ಹಿಂದೂ ಧರ್ಮದ ಸಂಪ್ರದಾಯಗಳ ಪ್ರಕಾರ ವಿವಾಹ ನಡೆಸಿಕೊಟ್ಟಿದ್ದಾರೆ.
ಈಗ ರಾಜೇಶ್ವರಿಗೆ 22 ವರ್ಷ . ಅಬ್ದುಲ್ಲ-ಖದೀಜಾ ದಂಪತಿಯ ಸಾಕು ಪುತ್ರಿ ತಂಜಾವೂರು ನಿವಾಸಿಯಾದ ರಾಜೇಶ್ವರಿ 7 ವರ್ಷ ಪ್ರಾಯವಿದ್ದಾಗ ಇಲ್ಲಿಗೆ ತಲುಪಿದ್ದರು. ಆಕೆಗೆ 10 ವರ್ಷವಾದಾಗ ತಂದೆ- ತಾಯಿ ನಿಧನ ಹೊಂದಿದ್ದರು. ತಂದೆ – ತಾಯಿ ತೀರಿಕೊಂಡಿರುವುದಾಗಿ ಈ ಸಂದರ್ಭದಲ್ಲಿ ತಿಳಿದುಬಂದಿದ್ದು , ಇದರಿಂದ ಈ ಬಾಲಕಿಯನ್ನು ಅಬ್ದುಲ್ಲಾ ರವರ ಕುಟುಂಬದವರು ತಮ್ಮ ಮಗಳಂತೆ ಪೋಷಣೆ ಮಾಡಿದ್ದರು . ಅಬ್ದುಲ್ಲಾರ ಮೂವರು ಮಕ್ಕಳ ಜೊತೆ ಈಕೆ ಇನ್ನೊಬ್ಬಳು ಮಗಳೆಂದು ಗುರುತಿಸಿಕೊಂಡಳು . ಈಗ 22 ವರ್ಷ ಪ್ರಾಯ ಆಗುತ್ತಲೇ ಅಬ್ದುಲ್ಲರು ವಿವಾಹದ ಬಗ್ಗೆ ಚಿಂತನೆ ನಡೆಸಿದರು. ರಾಜೇಶ್ವರಿ ಮತ್ತು ಅಬ್ದುಲ್ಲಾರಿಗೆ ಇಷ್ಟಗೊಂಡ ವರನನ್ನು ಹುಡುಕಿದರು. ಕೊನೆಗೆ ಕಾಞ೦ಗಾಡ್ ಪುದಿಯ ಕೋಟದ ಬಾಲಚಂದ್ರನ್ – ಜಯಂತಿ ದಂಪತಿ ಪುತ್ರ ವಿಷ್ಣುಪ್ರಸಾದ್ ಜೊತೆ ವಿವಾಹಕ್ಕೆ ತೀರ್ಮಾನಿಸಲಾಯಿತು .
ಕ್ಷೇತ್ರದ ಮುಖ್ಯ ತಂತ್ರಿಯವರ ನೇತೃತ್ವದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ರಾಜೇಶ್ವರಿ ಸಂಬಂಧಿಕರಾಗಿ ಅಬ್ದುಲ್ಲಾ-ಕದೀಜಾ ದಂಪತಿಗಳು, ವರ ವಿಷ್ಣುಪ್ರಸಾದ್ರವರ ಪೋಷಕರು , ಸಂಬಂಧಿಕರು , ಹಿತೈಷಿಗಳು ಪಾಲ್ಗೊಂಡಿದ್ದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…