ಪೋಷಕರನ್ನು ಕಳೆದು ಅನಾಥವಾಗಿದ್ದ ಬಾಲಕಿಯನ್ನು ತಮ್ಮ ಮಗಳಂತೆ ಸಾಕಿ ಹಿಂದೂ ಯುವಕನೊಂದಿಗೆ ಮದುವೆ ಮಾಡಿದ ಮುಸ್ಲಿಂ ದಂಪತಿ -Vishwanews24

ಕಾಸರಗೋಡು : ಚಿಕ್ಕಂದಿನಿಂದಲೇ ಪೋಷಕರನ್ನು ಕಳೆದು ಅನಾಥವಾಗಿದ್ದ ಹಿಂದೂ ಬಾಲಕಿಗೆ ತಮ್ಮ ಮಗಳಂತೆ ಸಾಕಿ ಸಲಹಿದವರು ಕೆ.ಅಬ್ದುಲ್ಲಾ – ಖದೀಜಾ ದಂಪತಿ . ಕೊನೆಗೂ ತಮ್ಮ ಸ್ವಂತ ಮಗಳಂತೆ ವಿವಾಹವನ್ನು ಹಿಂದೂ ಯುವಕನ ಜೊತೆಯೇ ನೆರವೇರಿಸಿಕೊಡುವ ಮೂಲಕ ಸೌಹಾರ್ಧತೆಯ ಸಂದೇಶವನ್ನು ತೋರಿಸಿಕೊಟ್ಟಿದ್ದಾರೆ.

ಹನ್ನೆರಡು ವರ್ಷಗಳ ಹಿಂದೆ, ತನ್ನ ಹತ್ತನೇ ವಯಸ್ಸಿನಲ್ಲಿ ಹೆತ್ತವರನ್ನು ಕಳೆದುಕೊಂಡು ಅನಾಥಳಾದ ರಾಜೇಶ್ವರಿ ಯನ್ನು ಮಗಳಾಗಿ ಸ್ವೀಕರಿಸಿದ ಎ.ಅಬ್ದುಲ್ಲಾ ಮತ್ತು ಕದೀಜಾ ತಮ್ಮ ಸ್ವಂತ ಮಗಳಂತೆ ಸಾಕಿ,ಸಲಹಿ, ಸಕಲ ಖರ್ಚುಗಳನ್ನೂ ತಾವೇ ಭರಿಸಿ ಅವಳನ್ನು ಯೋಗ್ಯ ವರನಿಗೆ ಹಿಂದೂ ಧರ್ಮದ ಸಂಪ್ರದಾಯಗಳ ಪ್ರಕಾರ ವಿವಾಹ ನಡೆಸಿಕೊಟ್ಟಿದ್ದಾರೆ.

ಈಗ ರಾಜೇಶ್ವರಿಗೆ 22 ವರ್ಷ . ಅಬ್ದುಲ್ಲ-ಖದೀಜಾ ದಂಪತಿಯ ಸಾಕು ಪುತ್ರಿ ತಂಜಾವೂರು ನಿವಾಸಿಯಾದ ರಾಜೇಶ್ವರಿ 7 ವರ್ಷ ಪ್ರಾಯವಿದ್ದಾಗ ಇಲ್ಲಿಗೆ ತಲುಪಿದ್ದರು. ಆಕೆಗೆ 10 ವರ್ಷವಾದಾಗ ತಂದೆ- ತಾಯಿ ನಿಧನ ಹೊಂದಿದ್ದರು. ತಂದೆ – ತಾಯಿ ತೀರಿಕೊಂಡಿರುವುದಾಗಿ ಈ ಸಂದರ್ಭದಲ್ಲಿ ತಿಳಿದುಬಂದಿದ್ದು , ಇದರಿಂದ ಈ ಬಾಲಕಿಯನ್ನು ಅಬ್ದುಲ್ಲಾ ರವರ ಕುಟುಂಬದವರು ತಮ್ಮ ಮಗಳಂತೆ ಪೋಷಣೆ ಮಾಡಿದ್ದರು . ಅಬ್ದುಲ್ಲಾರ ಮೂವರು ಮಕ್ಕಳ ಜೊತೆ ಈಕೆ ಇನ್ನೊಬ್ಬಳು ಮಗಳೆಂದು ಗುರುತಿಸಿಕೊಂಡಳು . ಈಗ 22 ವರ್ಷ ಪ್ರಾಯ ಆಗುತ್ತಲೇ ಅಬ್ದುಲ್ಲರು ವಿವಾಹದ ಬಗ್ಗೆ ಚಿಂತನೆ ನಡೆಸಿದರು. ರಾಜೇಶ್ವರಿ ಮತ್ತು ಅಬ್ದುಲ್ಲಾರಿಗೆ ಇಷ್ಟಗೊಂಡ ವರನನ್ನು ಹುಡುಕಿದರು. ಕೊನೆಗೆ ಕಾಞ೦ಗಾಡ್ ಪುದಿಯ ಕೋಟದ ಬಾಲಚಂದ್ರನ್ – ಜಯಂತಿ ದಂಪತಿ ಪುತ್ರ ವಿಷ್ಣುಪ್ರಸಾದ್ ಜೊತೆ ವಿವಾಹಕ್ಕೆ ತೀರ್ಮಾನಿಸಲಾಯಿತು .

ಕ್ಷೇತ್ರದ ಮುಖ್ಯ ತಂತ್ರಿಯವರ ನೇತೃತ್ವದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ರಾಜೇಶ್ವರಿ ಸಂಬಂಧಿಕರಾಗಿ ಅಬ್ದುಲ್ಲಾ-ಕದೀಜಾ ದಂಪತಿಗಳು, ವರ ವಿಷ್ಣುಪ್ರಸಾದ್‌ರವರ ಪೋಷಕರು , ಸಂಬಂಧಿಕರು , ಹಿತೈಷಿಗಳು ಪಾಲ್ಗೊಂಡಿದ್ದರು.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

18 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

19 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago