ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿ ಅಥವಾ ಮೊಬೈಲ್ ತೆಗೆಸಿಕೊಟ್ಟು ಸುಮ್ಮನಾದರೆ ಸಾಲದು. ಮಕ್ಕಳ ವರ್ತನೆಯನ್ನು ಗಮನಿಸುತ್ತ ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಆಗ ಮಾತ್ರ ಸಾಧನೆ ಮಾಡಲು ಶಿಕ್ಷಕರು ಮಕ್ಕಳನ್ನು ಪ್ರೇರೇಪಿಸಬಹುದು, ಸಾಧಿಸುವ ಛಲವನ್ನು ಹುಟ್ಟು ಹಾಕಬಹುದು. ಹಾಗಾಗಿ ಪೋಷಕರು ಆಗಾಗ್ಗೆ ಶಾಲೆಗೆ ಭೇಟಿ ನೀಡುವುದು ಸೂಕ್ತ ಎಂದು ಅಜ್ಜರಕಾಡು ವಾರ್ಡ್ ನಗರ ಸಭಾ ಸದಸ್ಯೆ ರಶ್ಮಿ ಸಿ. ಭಟ್ ಅಭಿಪ್ರಾಯ ಪಟ್ಟರು. ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅವರು ಮಾತನಾಡುತ್ತ ಈ ಶಾಲೆಯ ವಿದ್ಯಾರ್ಥಿನಿಯರ ಪೋಷಕರು ಬಹುಪಾಲು ಪ್ರಜ್ಞಾವಂತರಾಗಿದ್ದಾರೆ, ಆದ್ದರಿಂದ ಶಿಕ್ಷಕರ ಪ್ರಯತ್ನ ಸಾರ್ಥಕವಾಗುತ್ತಿದೆ. ಶಾಲೆಗೆ ಪೋಷಕರ ಸಹಕಾರ ಇದೇ ರೀತಿ ಮುಂದುವರಿಯಲಿ ಎಂದು ಆಶಿಸಿದರು.
ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರೇ ಗೌಡ ವಹಿಸಿ ಸಾಧನೆ ಮಾಡಿದ ವಿದ್ಯಾರ್ಥಿನಿಯರು ತಮ್ಮ ನಂತರದ ಬ್ಯಾಚ್ ನ ವಿದ್ಯಾರ್ಥಿನಿಯರಿಗೆ ತಮ್ಮ ಸಾಧನಾ ಪಥವನ್ನು ವಿವರಿಸಿ ಹೇಳಿ ಅವರಿಗೂ ಮಾರ್ಗದರ್ಶನ ಮಾಡಬೇಕೆಂದು ತಿಳಿ ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ತಾರಾ ದೇವಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನಿಯಾದ ಕು| ಸಮತಾಳನ್ನು ಹಾಗೂ ಇಪ್ಪತ್ತು ಮಂದಿ ಸಾಧಕ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಸಮತಾ ತನ್ನ ಅನುಭವವನ್ನು ಹಂಚಿಕೊಂಡಳು. ಈ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಹೊಸ ಸದಸ್ಯರನ್ನೂ ಕೂಡ ಆಯ್ಕೆ ಮಾಡಲಾಯಿತು. ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಶೇಖರ್ ಬೋವಿ ವಂದಿಸಿದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…