Featured

ಪೋಷಕರು ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು : ರಶ್ಮಿ ಸಿ. ಭಟ್ -Vishwanews24

ಪೋಷಕರು ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು : ರಶ್ಮಿ ಸಿ. ಭಟ್ -Vishwanews24

ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿ ಅಥವಾ ಮೊಬೈಲ್ ತೆಗೆಸಿಕೊಟ್ಟು ಸುಮ್ಮನಾದರೆ ಸಾಲದು. ಮಕ್ಕಳ ವರ್ತನೆಯನ್ನು ಗಮನಿಸುತ್ತ ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಆಗ ಮಾತ್ರ ಸಾಧನೆ ಮಾಡಲು ಶಿಕ್ಷಕರು ಮಕ್ಕಳನ್ನು ಪ್ರೇರೇಪಿಸಬಹುದು, ಸಾಧಿಸುವ ಛಲವನ್ನು ಹುಟ್ಟು ಹಾಕಬಹುದು. ಹಾಗಾಗಿ ಪೋಷಕರು ಆಗಾಗ್ಗೆ ಶಾಲೆಗೆ ಭೇಟಿ ನೀಡುವುದು ಸೂಕ್ತ ಎಂದು ಅಜ್ಜರಕಾಡು ವಾರ್ಡ್ ನಗರ ಸಭಾ ಸದಸ್ಯೆ ರಶ್ಮಿ ಸಿ. ಭಟ್ ಅಭಿಪ್ರಾಯ ಪಟ್ಟರು. ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅವರು ಮಾತನಾಡುತ್ತ ಈ ಶಾಲೆಯ ವಿದ್ಯಾರ್ಥಿನಿಯರ ಪೋಷಕರು ಬಹುಪಾಲು ಪ್ರಜ್ಞಾವಂತರಾಗಿದ್ದಾರೆ, ಆದ್ದರಿಂದ ಶಿಕ್ಷಕರ ಪ್ರಯತ್ನ ಸಾರ್ಥಕವಾಗುತ್ತಿದೆ. ಶಾಲೆಗೆ ಪೋಷಕರ ಸಹಕಾರ ಇದೇ ರೀತಿ ಮುಂದುವರಿಯಲಿ ಎಂದು ಆಶಿಸಿದರು.

ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರೇ ಗೌಡ ವಹಿಸಿ ಸಾಧನೆ ಮಾಡಿದ ವಿದ್ಯಾರ್ಥಿನಿಯರು ತಮ್ಮ ನಂತರದ ಬ್ಯಾಚ್ ನ ವಿದ್ಯಾರ್ಥಿನಿಯರಿಗೆ ತಮ್ಮ ಸಾಧನಾ ಪಥವನ್ನು ವಿವರಿಸಿ ಹೇಳಿ ಅವರಿಗೂ ಮಾರ್ಗದರ್ಶನ ಮಾಡಬೇಕೆಂದು ತಿಳಿ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ತಾರಾ ದೇವಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನಿಯಾದ ಕು| ಸಮತಾಳನ್ನು ಹಾಗೂ ಇಪ್ಪತ್ತು ಮಂದಿ ಸಾಧಕ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಸಮತಾ ತನ್ನ ಅನುಭವವನ್ನು ಹಂಚಿಕೊಂಡಳು. ಈ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಹೊಸ ಸದಸ್ಯರನ್ನೂ ಕೂಡ ಆಯ್ಕೆ ಮಾಡಲಾಯಿತು. ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಶೇಖರ್ ಬೋವಿ ವಂದಿಸಿದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

15 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

15 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

15 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

18 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

18 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago