ಹೊಸದಿಲ್ಲಿ: ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ.
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಯೋಜನೆ ಕಳೆದ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದರೆ, ಬುಧವಾರ ರಾಜ್ಯಸಭೆಯಲ್ಲಿ ಒಪ್ಪಿಗೆ ಪಡೆದಿತ್ತು.
ಸರಕಾರದ ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾಗುವ ಮೂಲಕ ಈ ಮಸೂದೆ ಕಾಯಿದೆಯಾಗಿ ಜಾರಿಗೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಕಾಯ್ದೆ ಪ್ರಕಾರ ಪಾಕಿಸ್ಥಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನ ದೇಶಗಳಲ್ಲಿ ಧಾರ್ಮಿಕ ಕಿರುಕುಳ ಅನುಭವಿಸಿ 2014ರ ಡಿಸೆಂಬರ್ 31ರ ಒಳಗೆ ಭಾರತಕ್ಕೆ ಆಶ್ರಯಕ್ಕಾಗಿ ಆಗಮಿಸಿದ ಮುಸ್ಲಿಮೇತರರಿಗೆ (ಹಿಂದೂ, ಸಿಖ್ಖ್, ಬೌಧ್ದರು, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯ) ಭಾರತದ ಪೌರತ್ವ ನೀಡಲಾಗುವುದು.
ನೆರೆಯ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2014ರೊಳಗೆ ವಲಸೆ ಬಂದಿರುವ ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನ ಮತ್ತು ಪಾರ್ಸಿ ಮತಸ್ಥರಿಗೆ ಭಾರತದ ಪೌರತ್ವವನ್ನು ನೀಡಲಾಗುತ್ತದೆ.
ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗಿತ್ತು. ರಾಜ್ಯ ಸಭೆಯಲ್ಲಿ ಮಸೂದೆಯ ಪರವಾಗಿ 125 ಮತ್ತು ವಿರೋಧವಾಗಿ 105 ಮತಗಳು ಬಿದಿದ್ದವು. ಇತ್ತ ಲೋಕಸಭೆಯಲ್ಲಿ ಸೋಮವಾರ ಪೌರತ್ವ ತಿದ್ದುಪಡಿ ಮಸೂದೆ 311 ಮತಗಳಿಂದ ಪಾಸ್ ಆಗಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…