ಪೌರ ಕಾರ್ಮಿಕರ ಬೇಡಿಕೆಗಳ ಮನವಿ ಸ್ವೀಕರಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

Featured, ಉಡುಪಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ

ಪೌರ ಕಾರ್ಮಿಕರ ಬೇಡಿಕೆಗಳ ಮನವಿ ಸ್ವೀಕರಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇಂದು ಕಾಪು ಪುರಸಭೆಯ ಆವರಣದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಇಲ್ಲಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.ಪೌರ ಕಾರ್ಮಿಕರ ಬೇಡಿಕೆಗಳ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಪಟ್ಟಣವನ್ನು ಊಹಿಸಲು ಸಾಧ್ಯವಿಲ್ಲ. ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಿಮ್ಮ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ. ಈ ಬಗ್ಗೆ ಪೌರಾಡಳಿತ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಮ್ಮ ಬೇಡಿಕೆ ಈಡೇರಿಸುವಂತೆ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.

ಮಂಗಳೂರು :  ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ ಕದಡಲು ಕಾಂಗ್ರೆಸ್ ಸರ್ಕಾರವೇ ನೇರ ಕಾರಣ :  ಸತೀಶ್ ಕುಂಪಲ ಆರೋಪ – vishwanews24

Leave a Reply