ಬೆಂಗಳೂರು, -ಐಟಿ ದಾಳಿ ಪ್ರಕರಣದ ನೋಟೀಸ್ಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತೀವ್ರ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ನನಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಎದುರಿಸುವ ಧೈರ್ಯ ನನಗಿದೆ. ನ್ಯಾಯಾಲಯದಲ್ಲಿರುವುದರಿಂದ ನಾನು ಏನನ್ನೂ ಹೇಳುವುದಿಲ್ಲ. ಇಲ್ಲದಿದ್ದರೆ ನಾನೇನು ಎಂಬುದನ್ನು ತೋರಿಸುತ್ತಿದ್ದೆ. ಐಟಿ ಕೇಸ್ನಲ್ಲಿ ನನ್ನನ್ನು ದುರುದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ. ಐಟಿ ದಾಳಿ ಪ್ರಕರಣದಲ್ಲಿ ನನಗೆ ಯಾವುದೇ ಸಮನ್ಸ್ ಬಂದಿಲ್ಲ. ಆದರೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಬಂದಿದೆ. ವಿಚಾರಣೆ ಎದುರಿಸುತ್ತೇವೆ, ದೇಶದ ಕಾನೂನಿಗೆ ಗೌರವ ಕೊಡುತ್ತೇವೆ ಎಂದು ಅವರು ಹೇಳಿದರು.
ಐಟಿ ಪ್ರಕರಣದಲ್ಲಿ ನನಗಷ್ಟೇ ಅಲ್ಲ, ನನ್ನ ಸಂಬಂಧಿಕರಿಗೆ, ಆಪ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಯಾರು ಮಾಡಿಸುತ್ತಿದ್ದಾರೆ, ಅವರ ಹಿನ್ನೆಲೆ ಏನೆಂದು ನನಗೆ ಗೊತ್ತು. ಅದನ್ನು ಸದ್ಯದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಹೇಳಿದರು. ಇದರಿಂದ ಡಿ.ಕೆ.ಶಿವಕುಮಾರ್ ಧೃತಿಗೆಡುವುದಿಲ್ಲ. ಕಾನೂನು ಹೋರಾಟ ನಡೆಸುತ್ತೇನೆ ಎಂದು ಹೇಳಿದರು.
ಏನೋ ಪ್ರಮಾದವಾಗಿದೆ ಎಂದು ನೀವು ಬಿಂಬಿಸುತ್ತೀರ. ನಿಮಗೆ ಹೇಗೆ ಸಂತೋಷವಾಗುತ್ತದೋ ಹಾಗೆ ಮಾಡಿ. ಅವರಿಗೆ ಹೇಗೆ ಸಂತೋಷವಾಗುತ್ತದೆಯೋ ಹಾಗೆ ಮಾಡಲಿ. ಕೊನೆಗೆ ದೇಶದ ಕಾನೂನು ಅಂತ ಒಂದಿದೆ. ಅದರ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…