Featured

‘ಪ್ರಕರಣ ಸಿಬಿಐಗೆ ವಹಿಸಿದರೆ ನಾನೂ ಎಲ್ಲಾ ದಾಖಲೆ, ವಿವರಗಳನ್ನು ಬಿಚ್ಚಿಡಲು ಸಿದ್ಧನಿದ್ದೇನೆ” : ಮನ್ಸೂರ್‌ ಖಾನ್‌ -Vishwanews24

ಬೆಂಗಳೂರು: ”ನಾನು ಭಾರತಕ್ಕೆ ಬಂದು ಹೂಡಿಕೆದಾರರ ಹಣ ಹಿಂದಿರುಗಿಸಲು ಸಿದ್ಧನಿದ್ದೇನೆ. ಹಾಗೆಯೇ ಕಾನೂನು ಕ್ರಮಕ್ಕೆ ಒಳಪಡಲೂ ಸಿದ್ಧನಿದ್ದೇನೆ,” ಎಂದು ಐಎಂಎ ಮಾಲೀಕ ಮನ್ಸೂರ್‌ ಖಾನ್‌ ವಿಡಿಯೊದಲ್ಲಿ ಹೇಳಿದ್ದಾರೆ.

13 ವರ್ಷಗಳಿಂದ 21 ಸಾವಿರ ಕುಟುಂಬಗಳು ಐಎಂಎನಿಂದ ಅನ್ನ ತಿಂದಿವೆ. ದೇಶಾದ್ಯಂತ 18 ಸಾವಿರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಾ ಬಂದಿದ್ದೇನೆ. ಸಚಿವ ಜಮೀರ್‌ ಅಹಮದ್‌ ಅವರು ‘ವಾಪಸ್‌ ಬಾ. ನಿನ್ನ ನೆರವಿಗೆ ನಾವಿದ್ದೇವೆ’ ಎಂದು ಹೇಳಿದ್ದನ್ನು ನೋಡಿದೆ. ಆದರೆ, ಅವರಿಂದ ನನಗೆ ಸಹಾಯ ಮಾಡಲು ಸಾಧ್ಯವೇ ಇಲ್ಲ ಎನ್ನುವುದು ನನಗೆ ಗೊತ್ತಿದೆ” ಎಂದು ಹೇಳಿದ್ದಾನೆ.

ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಸಚಿವ ಆರ್‌. ರೋಷನ್‌ಬೇಗ್‌ ಒತ್ತಾಯಿಸಿರುವ ಬಗ್ಗೆ ಪ್ರಸ್ತಾಪಿಸಿರುವ ಮನ್ಸೂರ್‌, ”ಪ್ರಕರಣ ಸಿಬಿಐಗೆ ವಹಿಸಿದರೆ ನಾನೂ ಎಲ್ಲಾ ದಾಖಲೆ, ವಿವರಗಳನ್ನು ಬ್ಲ್ಯಾಕ್‌ ಆಂಡ್‌ ವೈಟ್‌ ಆಗಿ ಬಿಚ್ಚಿಡಲು ಸಿದ್ಧನಿದ್ದೇನೆ” ಎಂದು ತಿಳಿಸಿದ್ದಾನೆ.

”ನನ್ನ ಬಳಿ 500 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. 120 ಕೆಜಿ ಚಿನ್ನ, 600 ಚಿನ್ನದ ಬುಲಿಯನ್ಸ್‌ಗಳಿದ್ದವು. ಐಎಂಎ ನಿರ್ದೇಶಕರಾದ ನಿಜಾಮುದ್ದೀನ್‌ ಮತ್ತು ಖಾಲಿದ್‌ ಅವರು ಈ ಚಿನ್ನವನ್ನೆಲ್ಲಾ ಸಾಗಿಸಿದ್ದಾರೆ. ಇವರ ವಿರುದ್ಧ ನಾನು ಕ್ರಮ ಕೈಗೊಳ್ಳಲು ಸಿದ್ಧನಿದ್ದೆ. ಆದರೆ, ಮೊದಲು ನಾನು ಬಚಾವಾಗಬೇಕಿತ್ತು. ನನ್ನಿಂದ ಯಾರಾರ‍ಯರು ಸುಲಿಗೆ, ಬ್ಲ್ಯಾಕ್‌ಮೇಲ್‌ ಮಾಡಿ ಕೋಟಿಗಟ್ಟಲೆ ಹಣ ಸುಲಿದಿದ್ದಾರೋ ಅವರಿಂದಲೇ ಹೂಡಿಕೆದಾರರು ಹೋರಾಟ ಮಾಡಿ ಹಣ ವಸೂಲಿ ಮಾಡಬೇಕು. ನಾನು ಬಾಯಿ ಬಿಟ್ಟರೆ ಮಾಧ್ಯಮಗಳಲ್ಲೂ ಐಎಂಎ ವಿರುದ್ಧ ಸುದ್ದಿ ಪ್ರಸಾರ ಆಗುವುದು ನಿಂತು ಬಿಡುತ್ತದೆ” ಎಂದೂ ವಿಡಿಯೋದಲ್ಲಿ ಹೇಳಿದ್ದಾನೆ.

ಐಎಂಎಯನ್ನು ಈ ಸ್ಥಿತಿಗೆ ತಂದವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರೆಲ್ಲರಿಗೂ ಅಭಿನಂದನೆಗಳು ಎಂದಿದ್ದಾನೆ ಮನ್ಸೂರ್‌ .

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago