ಬೆಂಗಳೂರು: ”ನಾನು ಭಾರತಕ್ಕೆ ಬಂದು ಹೂಡಿಕೆದಾರರ ಹಣ ಹಿಂದಿರುಗಿಸಲು ಸಿದ್ಧನಿದ್ದೇನೆ. ಹಾಗೆಯೇ ಕಾನೂನು ಕ್ರಮಕ್ಕೆ ಒಳಪಡಲೂ ಸಿದ್ಧನಿದ್ದೇನೆ,” ಎಂದು ಐಎಂಎ ಮಾಲೀಕ ಮನ್ಸೂರ್ ಖಾನ್ ವಿಡಿಯೊದಲ್ಲಿ ಹೇಳಿದ್ದಾರೆ.
13 ವರ್ಷಗಳಿಂದ 21 ಸಾವಿರ ಕುಟುಂಬಗಳು ಐಎಂಎನಿಂದ ಅನ್ನ ತಿಂದಿವೆ. ದೇಶಾದ್ಯಂತ 18 ಸಾವಿರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಾ ಬಂದಿದ್ದೇನೆ. ಸಚಿವ ಜಮೀರ್ ಅಹಮದ್ ಅವರು ‘ವಾಪಸ್ ಬಾ. ನಿನ್ನ ನೆರವಿಗೆ ನಾವಿದ್ದೇವೆ’ ಎಂದು ಹೇಳಿದ್ದನ್ನು ನೋಡಿದೆ. ಆದರೆ, ಅವರಿಂದ ನನಗೆ ಸಹಾಯ ಮಾಡಲು ಸಾಧ್ಯವೇ ಇಲ್ಲ ಎನ್ನುವುದು ನನಗೆ ಗೊತ್ತಿದೆ” ಎಂದು ಹೇಳಿದ್ದಾನೆ.
ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಸಚಿವ ಆರ್. ರೋಷನ್ಬೇಗ್ ಒತ್ತಾಯಿಸಿರುವ ಬಗ್ಗೆ ಪ್ರಸ್ತಾಪಿಸಿರುವ ಮನ್ಸೂರ್, ”ಪ್ರಕರಣ ಸಿಬಿಐಗೆ ವಹಿಸಿದರೆ ನಾನೂ ಎಲ್ಲಾ ದಾಖಲೆ, ವಿವರಗಳನ್ನು ಬ್ಲ್ಯಾಕ್ ಆಂಡ್ ವೈಟ್ ಆಗಿ ಬಿಚ್ಚಿಡಲು ಸಿದ್ಧನಿದ್ದೇನೆ” ಎಂದು ತಿಳಿಸಿದ್ದಾನೆ.
”ನನ್ನ ಬಳಿ 500 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. 120 ಕೆಜಿ ಚಿನ್ನ, 600 ಚಿನ್ನದ ಬುಲಿಯನ್ಸ್ಗಳಿದ್ದವು. ಐಎಂಎ ನಿರ್ದೇಶಕರಾದ ನಿಜಾಮುದ್ದೀನ್ ಮತ್ತು ಖಾಲಿದ್ ಅವರು ಈ ಚಿನ್ನವನ್ನೆಲ್ಲಾ ಸಾಗಿಸಿದ್ದಾರೆ. ಇವರ ವಿರುದ್ಧ ನಾನು ಕ್ರಮ ಕೈಗೊಳ್ಳಲು ಸಿದ್ಧನಿದ್ದೆ. ಆದರೆ, ಮೊದಲು ನಾನು ಬಚಾವಾಗಬೇಕಿತ್ತು. ನನ್ನಿಂದ ಯಾರಾರಯರು ಸುಲಿಗೆ, ಬ್ಲ್ಯಾಕ್ಮೇಲ್ ಮಾಡಿ ಕೋಟಿಗಟ್ಟಲೆ ಹಣ ಸುಲಿದಿದ್ದಾರೋ ಅವರಿಂದಲೇ ಹೂಡಿಕೆದಾರರು ಹೋರಾಟ ಮಾಡಿ ಹಣ ವಸೂಲಿ ಮಾಡಬೇಕು. ನಾನು ಬಾಯಿ ಬಿಟ್ಟರೆ ಮಾಧ್ಯಮಗಳಲ್ಲೂ ಐಎಂಎ ವಿರುದ್ಧ ಸುದ್ದಿ ಪ್ರಸಾರ ಆಗುವುದು ನಿಂತು ಬಿಡುತ್ತದೆ” ಎಂದೂ ವಿಡಿಯೋದಲ್ಲಿ ಹೇಳಿದ್ದಾನೆ.
ಐಎಂಎಯನ್ನು ಈ ಸ್ಥಿತಿಗೆ ತಂದವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರೆಲ್ಲರಿಗೂ ಅಭಿನಂದನೆಗಳು ಎಂದಿದ್ದಾನೆ ಮನ್ಸೂರ್ .
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…