ಉಡುಪಿ: ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಪುವಿಗೆ ಆಗಮಿಸಿದ್ದಾರೆ. 5 ದಿನಗಳ ಕಾಲ ಅವರು ಆಯುರ್ವೇದ ಚಿಕಿತ್ಸೆ ಪಡೆಯಲು ಅವರು ಭಾನುವಾರ ರಾತ್ರಿ ಆಗಮಿಸಿದರು.
ನಗರದ ಕಾಪುವಿನಲ್ಲಿರುವ ಸಾಯಿರಾಧಾ ಹೆರಿಟೇಜ್ ರೆಸಾರ್ಟ್ ನಲ್ಲಿ ಸಿಎಂಗೆ ಪ್ರಕೃತಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೂಡ ಒಂದು ವಾರದ ಕೋರ್ಸ್ ಕೊಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಮಾಜಿ ಪ್ರಧಾನಿ ಉಡುಪಿಗೆ ಆಗಮಿಸಿದ್ದಾರೆ.
ಚಿಕಿತ್ಸೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಐದು ದಿನಗಳ ಕಾಲ ಹೆಲ್ತ್ ರಿಸಾರ್ಟ್ನಲ್ಲೇ ತಂಗಲಿದ್ದು, ಈ ಐದು ದಿನವೂ ಮಾಧ್ಯಮಗಳಿಂದ ದೂರವಿರಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ರೆಸಾರ್ಟ್ ಆಸು-ಪಾಸು ಮಾಧ್ಯಮಗಳಿಗೆ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿದೆ. ರೆಸಾರ್ಟ್ ಸಮೀಪ ಮಾಧ್ಯಮದವರನ್ನು ಬಿಡದಂತೆ ಸಿಎಂ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಆದರೆ, ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಜೆಡಿಎಸ್ ನಾಯಕರು ಮೃತಪಟ್ಟ ಹಿನ್ನಲೆಯಲ್ಲಿ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಈಗ ಪುನಃ ಚಿಕಿತ್ಸೆ ಮುಂದುವರೆಸಲು ಕಾಪುವಿಗೆ ಆಗಮಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…