Featured

ಪ್ರಚಂಡ ಗೆಲುವಿನೊಂದಿಗೆ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ಮೋದಿ ಇಂದು ಪ್ರಮಾಣ ವಚನ ಸ್ವೀಕಾರ -Vishwanews24

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವಿನೊಂದಿಗೆ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

 ಇಂದು ರಾಷ್ಟ್ರಪತಿ ಭವನದಲ್ಲಿ ಸಂಜೆ 7 ಗಂಟೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನೂತನ ಸಂಪುಟದ ಸಚಿವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರದ ಗೌಪ್ಯತೆ ಬೋಧಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ಹೇಳಲಾಗಿದೆ.

ರಾಷ್ಟ್ರಪತಿ ಭವನ ಮುಂಭಾಗ ಪದಗ್ರಹಣಕ್ಕೆ ಸಕಲ ಸಿದ್ಧತೆ ನಡೆದಿದೆ. ನರೇಂದ್ರ ಮೋದಿ ಅವರೊಂದಿಗೆ ಎನ್​ಡಿಎಯ 65ಕ್ಕೂ ಹೆಚ್ಚು ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಜ್ಞಾವಿಧಿಗೂ ಮೊದಲು ನರೇಂದ್ರ ಮೋದಿ ರಾಜ್‌ ಘಾಟ್‌ ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸಮಾಧಿ ಬಳಿ ತೆರಳಿ ಪುಷ್ಪ ನಮನ ಸಲ್ಲಿಸಿದರು.

ಈ ಸಮಾರಂಭಕ್ಕೆ ದೇಶ, ವಿದೇಶದ ಗಣ್ಯರು ಸಾಕ್ಷಿಯಾಗಲಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅಫ್ಘಾನಿಸ್ತಾನ ಅಧ್ಯಕ್ಷ ಅಬ್ದುಲ್ ಹಮೀದ್, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಒಲಿ, ಮ್ಯಾನ್ಮಾರ್ ಅಧ್ಯಕ್ಷ ಯು ವಿನ್ ಮಿಂಟ್, ಭೂತಾನ್ ಪ್ರಧಾನಿ ಲೋಟೆ ಶೆರಿಂಗ್, ಥಾಯ್ಲೆಂಡ್ ವಿಶೇಷ ರಾಯಭಾರಿ ಗ್ರಿಸಾಡಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್, ಕಿರ್ಗಿಸ್ತಾನ ಅಧ್ಯಕ್ಷ ಸೂರನ್ ಬೇ ಜೀನ್ ಬೆಕಾವೊ ಮತ್ತಿತರು ಪಾಲ್ಗೊಳ್ಳಲಿದ್ದಾರೆ.

ಅಲ್ಲದೆ, ಕರ್ನಾಟಕ ಸಿಎಂ ಕುಮಾರಸ್ವಾಮಿ, ಆಂಧ್ರ ನಿಯೋಜಿತ ಸಿಎಂ ಜಗಮೋಹನ್ ರೆಡ್ಡಿ, ತೆಲಂಗಾಣ ಸಿಎಂ ಚಂದ್ರಶೇಖರ ರಾವ್, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ತಮಿಳು ಸೂಪರ್ ಸ್ಟಾರ್ ಕಮ್ ರಾಜಕಾರಣಿಗಳಾದ ರಜನೀಕಾಂತ್, ಕಮಲ್ ಹಾಸನ್ ಮುಂತಾದ ಗಣ್ಯರೂ ಭಾಗಿಯಾಗಲಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago