ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಪ್ರಕರಣದಿಂದ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಪಡೆದಿದ್ದ ಹಿಂದೂ ನಾಯಕ, ಆರ್ಎಸ್ಎಸ್ ಮುಂದಾಳು ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.
ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್ಐಆರ್ ದಾಖಲಾಗಿತ್ತು. ಅಕ್ಟೋಬರ್ 20 ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ಬಾವನೆಗಳ ಪ್ರಚೋಜನೆ, ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಂತರ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್ಐಆರ್ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ದ್ವೇಷಪೂರಿತ ಎಂದು ವಾದಿಸಿದ್ದರು. ಇದೀಗ ಕೋರ್ಟ್ ಪೊಲೀಸರಿಗೆ ಮಹತ್ವದ ಸೂಚನೆ ನೀಡಿದೆ. ಮುಂದಿನ ವಿಚಾರಣೆ ವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.ಮುಂದಿನ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…