ಪ್ರಚೋದನಕಾರಿ ಹೇಳಿಕೆ : ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ – Vishwanews24
ಪ್ರಚೋದನಕಾರಿ ಹೇಳಿಕೆ : ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್
ಬೆಂಗಳೂರು: ನಟಿ, ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶೃತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿದೆ.
“ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್ಗೆ ಮತ ನೀಡಿ. ದೇಶದ ವಂಶ ಬೆಳೆಯಬೇಕು ಎಂದರೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಎಂದು ನಟಿ ಶೃತಿ ಹೇಳಿದ್ದರು.
ಕುಂದಾಪುರ: ಕೊಸಳ್ಳಿ ಫಾಲ್ಸ್ನಲ್ಲಿ ಸ್ನಾನಕ್ಕಿಳಿದು ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ – Vishwanews24
ಇದಕ್ಕೆ ಜೆಡಿಎಸ್, ನಟಿ ಶೃತಿಯವರು ಪ್ರಚೋದನಕಾರಿ ಭಾಷಣ ಮಾಡಿ ಮತದಾರರನ್ನು ಒಲಿಸಿಕೊಳ್ಳುವ ಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
