ಬೆಂಗಳೂರು: ನಟಿ, ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶೃತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿದೆ.
“ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್ಗೆ ಮತ ನೀಡಿ. ದೇಶದ ವಂಶ ಬೆಳೆಯಬೇಕು ಎಂದರೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಎಂದು ನಟಿ ಶೃತಿ ಹೇಳಿದ್ದರು.
ಇದಕ್ಕೆ ಜೆಡಿಎಸ್, ನಟಿ ಶೃತಿಯವರು ಪ್ರಚೋದನಕಾರಿ ಭಾಷಣ ಮಾಡಿ ಮತದಾರರನ್ನು ಒಲಿಸಿಕೊಳ್ಳುವ ಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…