ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು – vishwanews24

Featured, ಉಡುಪಿ

ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು

ಉಡುಪಿ: ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 3 ರಂದು ಭರತೇಶ್ ಕಂಕಣವಾಡಿ, ಪೊಲೀಸ್ ಉಪನಿರೀಕ್ಷಕರು (ಕಾ ಮತ್ತು ಸು), ಉಡುಪಿ ನಗರ ಪೊಲೀಸ್ ಠಾಣೆ ಇವರು ಸೋಷಿಯಲ್ ಮೀಡಿಯಾವನ್ನು ವೀಕ್ಷಿಸುತ್ತಿದ್ದಾಗ ವಾಟ್ಸಾಪ್ ಮುಖಾಂತರ ವಿಡಿಯೋ ಬಂದಿದ್ದು, ವಿಡಿಯೋದಲ್ಲಿ ಶರಣ್ ಪಂಪವೆಲ್ ಸುದ್ದಿ ಚಾನೆಲ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಯನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುತ್ತಾರೆ.

ದಕ್ಷಿಣ ಕನ್ನಡ, ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ – vishwanews24

ಆರೋಪಿ ಶರಣ್ ಪಂಪ್ ವೆಲ್ ನೀಡಿದ ವಿಡಿಯೋ ವಿವಿಧ ವಾಟ್ಸಪ್ ಗ್ರೂಪ್ ಗಳಿಗೆ ಹರಿಬಿಟ್ಟಿದ್ದು, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾ ಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುತ್ತಾರೆ

ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿರುತ್ತದೆ.

Leave a Reply