ಉಡುಪಿ: ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 3 ರಂದು ಭರತೇಶ್ ಕಂಕಣವಾಡಿ, ಪೊಲೀಸ್ ಉಪನಿರೀಕ್ಷಕರು (ಕಾ ಮತ್ತು ಸು), ಉಡುಪಿ ನಗರ ಪೊಲೀಸ್ ಠಾಣೆ ಇವರು ಸೋಷಿಯಲ್ ಮೀಡಿಯಾವನ್ನು ವೀಕ್ಷಿಸುತ್ತಿದ್ದಾಗ ವಾಟ್ಸಾಪ್ ಮುಖಾಂತರ ವಿಡಿಯೋ ಬಂದಿದ್ದು, ವಿಡಿಯೋದಲ್ಲಿ ಶರಣ್ ಪಂಪವೆಲ್ ಸುದ್ದಿ ಚಾನೆಲ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಯನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುತ್ತಾರೆ.
ಆರೋಪಿ ಶರಣ್ ಪಂಪ್ ವೆಲ್ ನೀಡಿದ ವಿಡಿಯೋ ವಿವಿಧ ವಾಟ್ಸಪ್ ಗ್ರೂಪ್ ಗಳಿಗೆ ಹರಿಬಿಟ್ಟಿದ್ದು, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾ ಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುತ್ತಾರೆ
ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…