Featured

ಪ್ರಜಾಪ್ರಭುತ್ವದಲ್ಲಿ ಹೋರಾಟದ ಹಕ್ಕು ಕಸಿಯುತ್ತಿರುವ ಜನವೀರೋಧಿ ಕಾಂಗ್ರೆಸ್ ಸರ್ಕಾರ : ಡಾ|ಧನಂಜಯ ಸರ್ಜಿ – vishwanews24

ಪ್ರಕರಣ ಹಿಂಪಡೆಯದಿದ್ದರೆ ಮುಂದಿನ ಹೋರಾಟಗಳಿಗೆ ಸರ್ಕಾರವೇ ನೇರ ಹೊಣೆ :  ಡಾ|ಧನಂಜಯ ಸರ್ಜಿ ಎಚ್ಚರಿಕೆ

ಉಡುಪಿ: ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಮತ್ತು ನಾಯಕರ ವಿರುದ್ದ ಪ್ರಕರಣ ದಾಖಲಿಸಿರುವ ರಾಜ್ಯ ಸರಕಾರ ಪ್ರಕರಣವನ್ನು ತಕ್ಷಣವೇ ವಾಪಾಸು ಪಡೆಯಬೇಕು. ವಾಪಾಸು ಪಡೆಯದಿದ್ದಲ್ಲಿ ಮುಂದಿನ ಹೋರಾಟಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಡಾ|ಧನಂಜಯ ಸರ್ಜಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಮಾಡುವ ಹಕ್ಕಿದೆ. ಪ್ರತಿಭಟನೆಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ. ಸರ್ಕಾರ ಬಂದು ಕೇವಲ 16 ತಿಂಗಳುಗಳ ಒಳಗೆ ಸಾಲು ಸಾಲು ಭ್ರಷ್ಟಾಚಾರ ಮಾಡಿ ನಾಡಿನ ಜನತೆಯ ಆಕ್ರೋಶಕ್ಕೆ ಕಾರಣರಾಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರ, ಇದೀಗ ಒಬ್ಬ ಪ್ರಾಮಾಣಿಕ ಶಿಕ್ಷಕನ ಮೇಲೆ ಗದಾಪ್ರಹಾರ ಮಾಡುತ್ತಿದೆ. ಅದನ್ನು ಪ್ರಶ್ನಿಸಿಲು ಹೋದರೆ ಎಫ್.ಐ.ಆರ್ ದಾಖಲಿಸುತ್ತದೆ.

ಉಡುಪಿ ಜಿಲ್ಲೆ ಕುಂದಾಫುರ ತಾಲ್ಲೂಕಿನ ಶಿಕ್ಷಕರೊಬ್ಬರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಶಿಕ್ಷಕರ ಪರವಾಗಿ ಬೆಂಬಲಿಸಿ ಪ್ರತಿಭಟಿಸಿದ್ದ ಉಡುಪಿಯ ನಮ್ಮ ಶಾಸಕರಾದ ಯಶಪಾಲ್ ಸುವರ್ಣ ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧವೂ ಎಫ್ಐಆರ್ ದಾಖಲಿಸಿ ದ್ವೇಷರಾಜಕಾರಣ ಮಾಡುತ್ತಿರುವುದು ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಸರ್ವಾಧಿಕಾರಕ್ಕೆ ಅವಕಾಶವಿಲ್ಲ.

ಶಿಕ್ಷಕರ ಸೇವೆ, ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರವೇ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಬಳಿಕ ಮತೀಯವಾದಿಗಳ ಒತ್ತಡಕ್ಕೆ ಮಣಿದು ಪ್ರಶಸ್ತಿಯನ್ನು ತಡೆ ಹಿಡಿಯಲಾಗಿದೆ, ಪ್ರಜಾಪ್ರಭುತ್ವದಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟಿಸುವುದು, ಧ್ವನಿ ಎತ್ತುವುದು ಮೂಲ ಹಕ್ಕು. ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ. ನಾನಾ ಹಗರಣಗಳಿಂದಾಗಿ ಸರ್ಕಾರದ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಅಲ್ಲದೇ ಅತಿವೃಷ್ಟಿಯಿಂದ ಸಂತ್ರಸ್ತರ ನೆರವಿಗೂ ಬಂದಿಲ್ಲ, ಇದು ನಿಜಕ್ಕೂ ಖಂಡನೀಯ. 11 ಮಂದಿ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ತಕ್ಷಣವೇ ವಾಪಾಸು ಪಡೆಯಬೇಕು. ವಾಪಾಸು ಪಡೆಯದಿದ್ದಲ್ಲಿ ಮುಂದಿನ ಹೋರಾಟಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

22 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

23 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

24 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

24 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

24 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

24 hours ago