Featured

ಪ್ರಜಾಪ್ರಭುತ್ವ ದೇಶದಲ್ಲಿ ಅಸ್ತಿತ್ವದಲ್ಲಿಲ್ಲ, ಅಸಮರ್ಥ ನಾಯಕರೊಬ್ಬರು ಭಾರತವನ್ನು ಮುನ್ನಡೆಸುತ್ತಿದ್ದಾರೆ : ರಾಹುಲ್‌ ಗಾಂಧಿ -Vishwanews24

ಪ್ರಜಾಪ್ರಭುತ್ವ ದೇಶದಲ್ಲಿ ಅಸ್ತಿತ್ವದಲ್ಲಿಲ್ಲ, ಅಸಮರ್ಥ ನಾಯಕರೊಬ್ಬರು ಭಾರತವನ್ನು ಮುನ್ನಡೆಸುತ್ತಿದ್ದಾರೆ : ರಾಹುಲ್‌ ಗಾಂಧಿ -Vishwanews24

ನವದೆಹಲಿ,: ”ಪ್ರಜಾಪ್ರಭುತ್ವ ದೇಶದಲ್ಲಿ ಅಸ್ತಿತ್ವದಲ್ಲಿಲ್ಲ, ಅಸಮರ್ಥ ನಾಯಕರೊಬ್ಬರು ಭಾರತವನ್ನು ಮುನ್ನಡೆಸುತ್ತಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 29 ದಿನಗಳಿಂದ ರೈತರು ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಲ್ಲಿದ್ದಾರೆ. ಈ ನಿಟ್ಟಿನಲ್ಲಿ ರಾಷ್ಟ್ರಪತಿ ಕೋವಿಂದ್‌ ಈ ಸಮಸ್ಯೆಗೆ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿರುವ ಕಾಂಗ್ರೆಸ್‌ನ ನಿಯೋಗವು ಗುರುವಾರ ರಾಷ್ಟ್ರ ಭವನದತ್ತ ಕಾಲ್ನಾಡಿಗೆ ಮೆರವಣಿಗೆಯನ್ನು ಆಯೋಜಿಸಿತ್ತು. ಹಾಗೆಯೇ ಈ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಂಗ್ರಹಿಸಿದ ಎರಡು ಕೋಟಿ ಹಸ್ತಾಕ್ಷರವಿರುವ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಲು ಕಾಂಗ್ರೆಸ್‌ ತೀರ್ಮಾನಿಸಿತ್ತು. ಆದರೆ ಕಾಂಗ್ರೆಸ್ ಪಾದಯಾತ್ರೆಗೆ ಪೊಲೀಸ್ ಅನುಮತಿ ನೀಡಿರಲಿಲ್ಲ.ಪೊಲೀಸರು ಕಾಂಗ್ರೆಸ್‌ನ ಈ ನಿಯೋಗವನ್ನು ತಡೆದಿದ್ದು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಅನುಮತಿ ಪಡೆದ ನಾಯಕರಿಗೆ ಮಾತ್ರ ರಾಷ್ಟ್ರಪತಿ ಭವನಕ್ಕೆ ಹೋಗಲು ಅವಕಾಶ ನೀಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಈ ಕೃತ್ಯವನ್ನು ಖಂಡಿಸಿರುವ ರಾಹುಲ್ ಗಾಂಧಿ, ”ದೇಶದಲ್ಲಿ ಪ್ರಜಾಪ್ರಭುತ್ವವೇ ಅಸ್ತಿತ್ವದಲ್ಲಿಲ್ಲ” ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡುವ ಅವಕಾಶವು ಕಾಂಗ್ರೆಸ್‌ನ ಮೂವರು ಮುಖಂಡರಿಗೆ ಮಾತ್ರ ದೊರೆತಿದ್ದು ಈ ಸಂದರ್ಭ ಕೃಷಿ ಕಾನೂನು ರದ್ದುಗೊಳಿಸುವಂತೆ ಆಗ್ರಹಿಸಿ ಎರಡು ಕೋಟಿ ಹಸ್ತಾಕ್ಷರವಿರುವ ಪತ್ರವನ್ನು ರಾಷ್ಟ್ರಪತಿಗೆ ರಾಹುಲ್ ಗಾಂಧಿ ಸಲ್ಲಿಸಿದ್ದಾರೆ.

”ಈ ಕಾ‌ಯ್ದೆಗಳು ಕೃಷಿ ವಿರೋಧಿ ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿದ್ದೇನೆ. ಈ ಕಾಯ್ದೆ ರದ್ದು ಪಡಿಸುವವರೆಗೂ ನಾನೂ ಮನೆಗೆ ವಾಪಾಸ್‌ ಹೋಗಲಾರೆ ಎಂದು ಪ್ರಧಾನಿಗೆ ನಾನು ಕೂಡಾ ಹೇಳಲು ಇಚ್ಛಿಸುತ್ತೇನೆ” ಎಂದು ಹೇಳಿದರು.

”ಪ್ರಧಾನಿ ಬಂಡವಾಳಶಾಹಿಗಳ ಪರವಾಗಿದ್ದಾರೆ. ಸರ್ಕಾರದ ವಿರುದ್ದವಿರುವವರಿಗೆ ಭಯೋತ್ಪಾದಕ ಎಂಬ ಹಣೆಪಟ್ಟಿ ಕಟ್ಟುತ್ತಾರೆ. ಅವರು ಶಾಂತಿಯಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಲಾಠಿ ಬೀಸುತ್ತಾರೆ” ಎಂದು ಹೇಳಿದರು.

 

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

8 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago