Featured

ಪ್ರಜ್ವಲ್‍ರನ್ನು ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆಯಲು ಈಗಾಗಲೇ ವಾರೆಂಟ್ ಜಾರಿಯಾಗಿದೆ : ಪರಮೇಶ್ವರ್ – vishwanews24

ಪ್ರಜ್ವಲ್‍ರನ್ನು ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆಯಲು ಈಗಾಗಲೇ ವಾರೆಂಟ್ ಜಾರಿಯಾಗಿದೆ : ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ  ಬರುವ ಮಾಹಿತಿ ಇದೆ. ಅವರೇ ಬರುವುದಾಗಿ ಹೇಳಿದ್ದು, ಬಂದರೆ ನಮ್ಮ ಎಸ್‍ಐಟಿ  ಅಧಿಕಾರಿಗಳು ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆಯುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‍ರನ್ನು ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆಯಲು ಈಗಾಗಲೇ ವಾರೆಂಟ್ ಜಾರಿಯಾಗಿದೆ. ಬಳಿಕ ಕಾನೂನು ಪ್ರಕಾರ ಅವರನ್ನು ವಿಚಾರಣೆ ನಡೆಸಲಾಗುತ್ತದೆ. ಪ್ರಜ್ವಲ್ ವಾಪಸ್ ಆಗುವ ಹಿನ್ನೆಲೆಯಲ್ಲಿ ಎಸ್‍ಐಟಿ ಎಲ್ಲಾ ತಯಾರಿ ಮಾಡಿಕೊಂಡಿದೆ. ಬೇರೆ ದೇಶಕ್ಕೆ ಹೋಗಿ ನಾವು ಅರೆಸ್ಟ್ ಮಾಡುವಂತಿಲ್ಲ. ಆ ರೀತಿ ಮಾಡಲು ಬರಲ್ಲ. ಕೇಂದ್ರ ಸರ್ಕಾರ ಕೂಡ ಯಾರನ್ನಾದರೂ ಕಳುಹಿಸಿ ಅರೆಸ್ಟ್ ಮಾಡಲು ಆಗಲ್ಲ. ಇಂಟರ್ ಪೋಲ್ ಕೂಡ ಇರೋದೆ ಅದಕ್ಕಾಗಿ. ನೆಲಮಂಗಲಕ್ಕೆ ಹೋಗಿ ಬಂಧನ ಮಾಡಿಕೊಂಡು ಬಂದಂಗೆ ಅಲ್ಲ. ಕಾನೂನು ಪ್ರಕಾರ ವಾರೆಂಟ್ ಜಾರಿಯಾಗಿದೆ. ಅದರಂತೆ ಏರ್‌ಪೋರ್ಟ್‌ನಲ್ಲೇ ಬಂಧನವಾಗಬೇಕು. ಬಂಧನಕ್ಕೆ ಅದರದ್ದೇ ಆದ ಪ್ರಕ್ರಿಯೆ ಇದೆ ಎಂದು ಅವರು ಹೇಳಿದ್ದಾರೆ.

ರದ್ದತಿಗೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕಾನೂನು ಪ್ರಕ್ರಿಯೆ ನೋಡಿ ರದ್ದು ಮಾಡ್ತಾರೆ. ಈ ಪ್ರಕ್ರಿಯೆಯಲ್ಲಿ ನಿಧಾನಗತಿ ಆಗಿದೆ. ಈಗ ರದ್ದು ಮಾಡುತ್ತೇವೆ ಎಂದಿದ್ದಾರೆ. ಪ್ರಜ್ವಲ್ ಪ್ರಕರಣ ಚುನಾವಣೆ ಮೇಲೆ ಎಫೆಕ್ಟ್ ಆಗುತ್ತೆ ಎಂಬ ಬಗ್ಗೆ ಗೊತ್ತಿಲ್ಲ. ಕಾನೂನು ಪ್ರಕಾರ ಎಲ್ಲಾ ಕ್ರಮವಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

15 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

15 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago