ಶಿವಮೊಗ್ಗ: ಲೋಕಸಭಾ ಚುನಾವಣೆಯ ಬೆನ್ನಲ್ಲೇ ರಾಜ್ಯದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಭಾರೀ ಸುದ್ದಿಯಲ್ಲಿದೆ. ಈ ಸಂಬಂಧ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಪ್ರಕರಣದಲ್ಲಿ ಕುಟುಂಬದ ಹೆಸರು ಯಾಕೆ ತರ್ತಿರಾ ಎಂದು ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಎಸ್ ಐಟಿ ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಇಲ್ಲಿ ವ್ಯಕ್ತಿ ಬಗ್ಗೆ ಚರ್ಚೆ ಮಾಡಿ, ಕುಟುಂಬದ ಹೆಸರು ಏಕೆ ತರುತ್ತೀರಾ?, ದೇವೇಗೌಡರು, ಕುಮಾರಸ್ವಾಮಿ ಅಂತಾ ಹೆಸರು ಏಕೆ ತರುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ತಪ್ಪುಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನಾನು ಯಾರನ್ನು ವಹಿಸಿಕೊಳ್ಳುತ್ತಿಲ್ಲ. ಎಫ್ಐಆರ್ ಹಾಕಿದ್ದಾರೆ, ಎಸ್ಐಟಿ ರಚನೆ ಆಗಿದೆ ತನಿಖೆ ನಡೆದು ಸತ್ಯಾಂಶ ಹೊರಗೆ ಬರಲಿ. ನಮ್ಮ ಗಮನಕ್ಕೆ ಬಂದಿದ್ದರೆ ಮುಜುಗರ ತಪ್ಪಿಸಬಹುದಿತ್ತು. ಪ್ರತಿನಿತ್ಯ ಯಾರು ಎಲ್ಲಿ ಹೋಗ್ತಾರೆ ಬರುತ್ತಾರೆ ಅಂತಾ ಕಾಯಲು ಆಗುತ್ತಾ ಎಂದು ಹೆಚ್ಡಿಕೆ ಗರಂ ಆಗಿದ್ದಾರೆ.
ಈ ಹಗರಣದಿಂದ ನನಗಷ್ಟೇ ಮುಜುಗರವಾಗೋದಿಲ್ಲ, ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ ಎಂದು ಹೇಳಿದ ಅವರು ಇದರಲ್ಲಿ ಯಾರನ್ನೂ ವಹಿಸಿಕೊಳ್ಳಲು ಹೋಗಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದರು.
ಎಫ್.ಐ.ಆರ್ ಆಗಿದೆ, ಸತ್ಯಾಂಶ ಹೊರಬರಲಿ. ಎಸ್ ಐಟಿ ತನಿಖೆ ಮಾಡಿ ವರದಿಯನ್ನು ನೀಡಲಿ. ಹಾಸನದಲ್ಲಿ ಪೆನ್ ಡ್ರೈವ್ ಬಿಟ್ಟವರು ಯಾರು? ಪೆನ್ ಡ್ರೈವ್ ಹಿಂದೆ ಯಾರಿದ್ದಾರೆ ಗೊತ್ತಾಗಲಿ ಎಂದು ಹೇಳಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…