ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಫೋಟೋ ಹಾಗೂ ವೀಡಿಯೋಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಒಳಗೆ ಇರುವ ವೀಡಿಯೋ ಹಾಗೂ ಫೋಟೋಗಳು ಅಸಲಿಯಾ? ನಕಲಿಯಾ? ಅನ್ನೋದು ಗೊತ್ತಾಗಬೇಕಿದೆ. ಚುನಾವಣೆಗಾಗಿ ಈ ಪೆನ್ ಡ್ರೈವ್ ಹಂಚಿಕೆ ಮಾಡಲಾಗಿದೆ. ಅದರಲ್ಲಿ ಇರುವವರು ಅವರೇನಾ ಅಥವಾ ಬೇರೆ ಅವರ ಫೋಟೋ ಅಂಟಿಸಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಅನುಮಾನ ಹೊರಹಾಕಿದ್ದಾರೆ.
ಸೋಶಿಯಲ್ ಮೀಡಿಯಾಕ್ಕೆ ವೀಡಿಯೋ ಬಿಟ್ಟ ಪುಣ್ಯಾತ್ಮರು ಮಹಿಳೆಯರ ಮುಖ ಬ್ಲರ್ ಮಾಡಬೇಕಿತ್ತು. ಇದರಿಂದ ಆ ಮಹಿಳೆಯ ಮಾನ ಮರ್ಯಾದೆ ಕುಟುಂಬದ ಮರ್ಯಾದೆ ಉಳಿಯುತಿತ್ತು. ಈ ಪ್ರಕರಣದಲ್ಲಿ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು. ಸಿಎಂ ಡಿಸಿಎಂ ಯಾವ ಅಧಿಕಾರಿಗಳಿಗೆ ಯಾವ ಸೂಚನೆ ಕೊಟ್ಟಿದ್ದಾರೆ?. ಯಾರ ಜೊತೆ ಸಭೆಗಳನ್ನು ಮಾಡಿದ್ದಾರೆ ಎಂದು ಹೆಚ್ಡಿಕೆ ಪ್ರಶ್ನೆ ಮಾಡಿದ್ದಾರೆ.
ಎಲ್ಲಾ ಮಾಹಿತಿ ನನ್ನ ಬಳಿ ಇದೆ. ಅವರ ಅಕ್ಕ-ಪಕ್ಕ ಇದ್ದವರೇ ಮಾಹಿತಿ ನೀಡಿದ್ದಾರೆ. ಅವರ ಬಳಿ ಇರುವವರು ನಮ್ಮ ಅಭಿಮಾನಿಗಳಿದ್ದಾರೆ. ಫೋನ್ ಟ್ಯಾಪಿಂಗ್ ಅನುಮಾನ ಅಲ್ಲ ಅದು ಪಕ್ಕಾ ಮಾಹಿತಿ ಎಂದು ಮೈಸೂರಿನಲ್ಲಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…