ಪ್ರಜ್ವಲ್ ರೇವಣ್ಣ ಕೇಸ್  ಯಾರು ಹೆಮ್ಮೆ ಪಡುವ ವಿಷಯ ಅಲ್ಲ, ಎಲ್ಲರೂ ತಲೆ ತಗ್ಗಿಸುವ ವಿಷಯ: ರಮೇಶ್ ಜಾರಕಿಹೊಳಿ – Vishwanews24

Featured, ರಾಜ್ಯ ನ್ಯೂಸ್

ಮುಂದೆ ಸಿಎಂ. ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಯೂ ಬರಬಹುದು :  ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

ಬೆಳಗಾವಿ : ಇಂದು ಒಬ್ಬರ ಸಿಡಿ ಹೊರಬಂದಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸಿಡಿಯೂ ಹೊರಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಒಬ್ಬರಿಗೆ ಆಗಿದೆ. ಮುಂದೆ ಸಿಎಂ ಸಿದ್ದರಾಮಯ್ಯನವರಿಗೂ ಆಗಬಹುದು. ಮೊದಲಿನಿಂದಲೂ ನಾನು ಸಿಡಿ ಬಗ್ಗೆ ಹೇಳಿಕೊಂಡೆ ಬಂದಿದ್ದೇನೆ. ಆಗ ಎಲ್ಲರೂ ನನ್ನ ಮಾತು ನಿರ್ಲಕ್ಷ್ಯ ಮಾಡಿದರು. ಇಂದು ಒಬ್ಬರಿಗೆ ಆಗಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಅವರಿಗೂ ಆಗಬಹುದು. ಅವರ ಸಿಡಿಯೂ ಹೊರಬರಬಹುದು ಎಂದು ಹೇಳಿದ್ದಾರೆ.

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನನ್ನದಲ್ಲ, ಅದು ಸಮಾಜದ ಆಸ್ತಿ ; ಇದಕ್ಕೆ ತಡೆ ಒಡ್ಡುವವರ ವಿರುದ್ಧ ಜನ ಪ್ರತಿಭಟಿಸಬೇಕು : ಸುನಿಲ್‌ ಕುಮಾರ್‌  – Vishwanews24

ನಾನು ಸಿಎಂ ಸಿದ್ದರಾಮಯ್ಯನವರಿಗೆ, ಗೃಹ ಸಚಿವ ಪರಮೇಶ್ವರ್ ಅವರಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಪಕ್ಷಾತೀತವಾಗಿ ಇಂತಹ ಪ್ರಕರಣಗಳಿಗೆ ಇತಿಶ್ರೀ ಹಾಡಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಕೇಸ್  ಯಾರು ಹೆಮ್ಮೆ ಪಡುವ ವಿಷಯ ಅಲ್ಲ. ಎಲ್ಲರೂ ತಲೆ ತಗ್ಗಿಸುವ ವಿಷಯ, ಬಹಳ ಕೆಟ್ಟ ಪ್ರಮಾಣದಲ್ಲಿ ಆಗಿದೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.

ಮತ ಹಾಕುವ ಮುನ್ನ ಬೆಳಗಾವಿಯ  ಗೋಕಾಕ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಬಗ್ಗೆ ಮಾತನಾಡಿದರು. ಪ್ರಜ್ವಲ್ ರೇವಣ್ಣ ಕೇಸ್ ಎಲ್ಲರೂ ತಲೆ ತಗ್ಗಿಸುವ ವಿಷಯ. ರೇವಣ್ಣ ಅವರು ಬೇಕಿದ್ದರೆ ಕಾನೂನು ರೀತಿ ಹೋರಾಟ ಮಾಡಲಿ ಎಂದು ನುಡಿದರು.

ಬಂಟ್ವಾಳ  : ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – Vishwanews24

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಡಿಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಇದರಲ್ಲಿ ಡಿಕೆಶಿ ನೇರವಾಗಿ ಭಾಗಿಯಾಗಿರುವ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ. ನನ್ನ ಕೇಸ್‌ನಲ್ಲೂ ಡಿಕೆಶಿ ಮಾತನಾಡಿರುವ ಸಾಕ್ಷಿ ಇದೆ, ಅದನ್ನೇ ಕೊಡುತ್ತೇನೆ. ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದಕ್ಕೆ ಸಾಕ್ಷಿಗಳೂ ಇವೆ ಎಂದು ಹೇಳಿದರು.

ನನ್ನ ಕೇಸ್‌ನಲ್ಲಿ ನಮ್ಮವರೂ ಇದ್ದಾರೆ:
ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಅಂದ್ರೆ, ಇದು ನಿಲ್ಲಬೇಕು. ನನ್ನ ಕೇಸ್‌ನಲ್ಲಿ ಡಿಕೆಶಿ ಮಾತ್ರ ಭಾಗಿಯಾಗಿಲ್ಲ. ನಮ್ಮವರೂ ಇದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದು ಎಚ್ಚರಿಸಿದರು.

Leave a Reply