Featured

ಪ್ರಜ್ವಲ್ ರೇವಣ್ಣ ಕೇಸ್  ಯಾರು ಹೆಮ್ಮೆ ಪಡುವ ವಿಷಯ ಅಲ್ಲ, ಎಲ್ಲರೂ ತಲೆ ತಗ್ಗಿಸುವ ವಿಷಯ: ರಮೇಶ್ ಜಾರಕಿಹೊಳಿ – Vishwanews24

ಮುಂದೆ ಸಿಎಂ. ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಯೂ ಬರಬಹುದು :  ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

ಬೆಳಗಾವಿ : ಇಂದು ಒಬ್ಬರ ಸಿಡಿ ಹೊರಬಂದಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸಿಡಿಯೂ ಹೊರಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಒಬ್ಬರಿಗೆ ಆಗಿದೆ. ಮುಂದೆ ಸಿಎಂ ಸಿದ್ದರಾಮಯ್ಯನವರಿಗೂ ಆಗಬಹುದು. ಮೊದಲಿನಿಂದಲೂ ನಾನು ಸಿಡಿ ಬಗ್ಗೆ ಹೇಳಿಕೊಂಡೆ ಬಂದಿದ್ದೇನೆ. ಆಗ ಎಲ್ಲರೂ ನನ್ನ ಮಾತು ನಿರ್ಲಕ್ಷ್ಯ ಮಾಡಿದರು. ಇಂದು ಒಬ್ಬರಿಗೆ ಆಗಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಅವರಿಗೂ ಆಗಬಹುದು. ಅವರ ಸಿಡಿಯೂ ಹೊರಬರಬಹುದು ಎಂದು ಹೇಳಿದ್ದಾರೆ.

ನಾನು ಸಿಎಂ ಸಿದ್ದರಾಮಯ್ಯನವರಿಗೆ, ಗೃಹ ಸಚಿವ ಪರಮೇಶ್ವರ್ ಅವರಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಪಕ್ಷಾತೀತವಾಗಿ ಇಂತಹ ಪ್ರಕರಣಗಳಿಗೆ ಇತಿಶ್ರೀ ಹಾಡಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಕೇಸ್  ಯಾರು ಹೆಮ್ಮೆ ಪಡುವ ವಿಷಯ ಅಲ್ಲ. ಎಲ್ಲರೂ ತಲೆ ತಗ್ಗಿಸುವ ವಿಷಯ, ಬಹಳ ಕೆಟ್ಟ ಪ್ರಮಾಣದಲ್ಲಿ ಆಗಿದೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.

ಮತ ಹಾಕುವ ಮುನ್ನ ಬೆಳಗಾವಿಯ  ಗೋಕಾಕ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಬಗ್ಗೆ ಮಾತನಾಡಿದರು. ಪ್ರಜ್ವಲ್ ರೇವಣ್ಣ ಕೇಸ್ ಎಲ್ಲರೂ ತಲೆ ತಗ್ಗಿಸುವ ವಿಷಯ. ರೇವಣ್ಣ ಅವರು ಬೇಕಿದ್ದರೆ ಕಾನೂನು ರೀತಿ ಹೋರಾಟ ಮಾಡಲಿ ಎಂದು ನುಡಿದರು.

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಡಿಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಇದರಲ್ಲಿ ಡಿಕೆಶಿ ನೇರವಾಗಿ ಭಾಗಿಯಾಗಿರುವ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ. ನನ್ನ ಕೇಸ್‌ನಲ್ಲೂ ಡಿಕೆಶಿ ಮಾತನಾಡಿರುವ ಸಾಕ್ಷಿ ಇದೆ, ಅದನ್ನೇ ಕೊಡುತ್ತೇನೆ. ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದಕ್ಕೆ ಸಾಕ್ಷಿಗಳೂ ಇವೆ ಎಂದು ಹೇಳಿದರು.

ನನ್ನ ಕೇಸ್‌ನಲ್ಲಿ ನಮ್ಮವರೂ ಇದ್ದಾರೆ:
ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಅಂದ್ರೆ, ಇದು ನಿಲ್ಲಬೇಕು. ನನ್ನ ಕೇಸ್‌ನಲ್ಲಿ ಡಿಕೆಶಿ ಮಾತ್ರ ಭಾಗಿಯಾಗಿಲ್ಲ. ನಮ್ಮವರೂ ಇದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದು ಎಚ್ಚರಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

23 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

23 hours ago