Featured

ಪ್ರಜ್ವಲ್ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಿ, ಆದರೆ ರೇವಣ್ಣ ಏನು ಮಾಡಿದ್ರು? :ಎಚ್‌ ಡಿ ದೇವೇಗೌಡ  – vishwanews24

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ, ಆದರೆ ರೇವಣ್ಣ ಏನು ಮಾಡಿದ್ರು? :ಎಚ್‌ಡಿ ದೇವೇಗೌಡ

ಬೆಂಗಳೂರು : ಪ್ರಜ್ವಲ್ ರೇವಣ್ಣ ಹಾಗೂ ಎಚ್‌ಡಿ ರೇವಣ್ಣ ಅವರ ಬಗ್ಗೆ ಒಂದು ಘಟನೆ ನಡೆಯುತ್ತಿದೆ. ರೇವಣ್ಣ ವಿಚಾರದಲ್ಲಿ ಕೋರ್ಟ್‌ನಲ್ಲಿ ಏನು ನಡೆಯುತ್ತಿದೆ. ಅದರ ಬಗ್ಗೆ ನಾನು ಈಗ ಕಾಮೆಂಟ್ ಮಾಡೊಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ತಿಳಿಸಿದರು.

ಇಂದು 92ನೇ ಹುಟ್ಟು ಹಬ್ಬ ಹಿನ್ನೆಲೆ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ಹೊರಗಡೆ ಹೋಗಿದ್ದಾರೆ. ಆದರೆ ಈ ಘಟನೆ ಬಗ್ಗೆ ಕುಮಾರಸ್ವಾಮಿಯವರು ಇಡೀ ನಮ್ಮ ಕುಟುಂಬದ ಪರವಾಗಿ ಉತ್ತರ ಕೊಟ್ಟಿದ್ದಾರೆ. ಕಾನೂನು ಏನಿದೆಯೋ ಆ ಕಾನೂನಿನ ವ್ಯಾಪ್ತಿಯಲ್ಲಿ ಏನೇನು ಕ್ರಮ ಕೈಗೊಳ್ಳಬೇಕೋ ಆ ಕ್ರಮ ಕೈಗೊಳ್ಳೋದು ಸರ್ಕಾರದ ಜವಾಬ್ದಾರಿ ಅಂತಾ ಹೇಳಿದ್ದಾರೆ. ಈ ಪ್ರಕರಣದಲ್ಲಿ ಅನೇಕ ಜನ ಇದ್ದಾರೆ. ನಾನು ಅವರ ಹೆಸರುಗಳನ್ನು ಈಗ ಹೇಳಲು ಹೋಗೊಲ್ಲ. ಈ ಪ್ರಕರಣದಲ್ಲಿ ಯಾರಾರೂ ಇದ್ದಾರೆ ಅವರೆಲ್ಲರ ಮೇಲೂ ಕ್ರಮ ಆಗಬೇಕು, ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಯಾವ ಹೆಣ್ಣು ಮಕ್ಕಳು ಅಪಾಯಕ್ಕೆ ಸಿಲುಕಿದ್ದಾರೆ ಅವರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರವನ್ನ ಈಗಾಗಲೇ ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ ಎಂದರು.

ಪ್ರಜ್ವಲ್ ಮೇಲೆ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವ ತಕರಾರು ಇಲ್ಲ, ಆದರೆ ರೇವಣ್ಣ ಏನು ಮಾಡಿದ್ರು? ಅವರ ಬಗ್ಗೆ ಸರ್ಕಾರ ಷಡ್ಯಂತ್ರ ಮಾಡಿರೋದು ರಾಜ್ಯದ ಜನರಿಗೆ ಗೊತ್ತಿದೆ. ಇದರಲ್ಲಿ ರೇವಣ್ಣರನ್ನ ಯಾವ ರೀತಿ ಸಿಲುಕಿಸಿದ್ದಾರೆ. ಕೇಸ್ ಹೇಗೆ ದಾಖಲು ಮಾಡಿದ್ದಾರೆ ಎಂಬುದು ತಿಳಿದಿದೆ. ಒಂದು ಕೇಸ್‌ಗೆ ಮೂರು ಬೇಲ್ ಕೊಟ್ಟಿದ್ದಾರೆ. ಇನ್ನೊಂದು ನಾಡಿದ್ದು ಜಡ್ಜ್‌ಮೆಂಟ್ ಇದೆ. ಅದು ಯಾವ ರೀತಿ ನಡೆಯಿತು ಅನ್ನೋದನ್ನ ನಾನೀಗ ವಿಶ್ಲೇಷಣೆ ಮಾಡೊಲ್ಲ. ಕುಮಾರಸ್ವಾಮಿ ಈ ಘಟನೆಯಲ್ಲಿ ಯಾರನ್ನೂ ಸ್ಪೇರ್ ಮಾಡಬೇಕಿಲ್ಲ ಎಂದು ತಿಳಿಸಿದ್ದಾರೆ.

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

29 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

41 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

45 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

53 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago