ಪ್ರಜ್ವಲ್ ರೇವಣ್ಣ ಪ್ರಕರಣ : ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ‌ ಕೋರ್ಟ್ – vishwanews24

Featured, ರಾಷ್ಟ್ರ ನ್ಯೂಸ್

ಪ್ರಜ್ವಲ್ ರೇವಣ್ಣ ಪ್ರಕರಣ : ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ‌ ಕೋರ್ಟ್

ಹೊಸದಿಲ್ಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಕುರಿತು ವಿಚಾರಣೆಯನ್ನು ನಡೆಸಿ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದವನ್ನು ಮಂಡಿಸಿದ್ದು, ದೂರಿನಲ್ಲಿ ಐಪಿಸಿ ಸೆಕ್ಷನ್ 376 ಅಥವಾ ಅತ್ಯಾಚಾರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದ್ದರು. ಆದರೆ ನ್ಯಾಯಮೂರ್ತಿ ತ್ರಿವೇದಿ ಅವರು ಹಲವಾರು ಇತರ ದೂರುಗಳಿವೆ ಎಂದು ಹೇಳಿದ್ದಾರೆ.

UDUPI : ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ನಿಧನ – vishwanews24

ಅಕ್ಟೋಬರ್ 21ರಂದು, ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

Leave a Reply