ನವದೆಹಲಿ : ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣವ್ ಮುಖರ್ಜಿ ಅವರ ಅಂತ್ಯ ಸಂಸ್ಕಾರವು ಸೇನೆಯ ಸಕಲ ಗೌರವಗಳೊಂದಿಗೆ ಮಂಗಳವಾರ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಣವ್ ನಿವಾಸಕ್ಕೆ ಭೇಟಿ ನೀಡಿ ಮಾಜಿ ರಾಷ್ಟ್ರಪತಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಪ್ರಣವ್ ನಿಧನದ ಕಾರಣ ಆಗಸ್ಟ್ 31 ರಿಂದ ಸೆಪ್ಟೆಂಬರ್ 6 ರವರೆಗೆ ದೇಶದಾದ್ಯಂತ ಶೋಕಾಚರಣೆ ಇರಲಿದೆ ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 84 ವರ್ಷ ಪ್ರಾಯದ ಪ್ರಣಬ್ ಮುಖರ್ಜಿ ಅವರು ಮೆದುಳು ಚಿಕತ್ಸೆಯ ಬಳಿಕ ಕೋಮಾಕ್ಕೆ ಜಾರಿದ್ದು ಸೋಮವಾರ ಕೊನೆಯುಸಿರೆಳೆದಿದ್ದಾರೆ. ಚಿಕಿತ್ಸೆಗೂ ಮುನ್ನ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು.
ಅಂತಿಮ ಕ್ರಿಯೆಗೂ ಮುನ್ನ ಪ್ರಣವ್ ಅವರ ಪಾರ್ಥಿವ ಶರೀರದ ದರ್ಶನಕ್ಕಾಗಿ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಅವರ ಅಧಿಕೃತ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಕೊರೊನಾ ಮಾರ್ಗಸೂಚಿಯಂತೆ ಅಂತಿಮ ವಿಧಿಗಾಗಿ ಮೃತದೇಹವನ್ನು ತೆರೆದ ವಾಹನದ ಬದಲು ಶವ ಸಾಗಾಟ ವಾಹನದಲ್ಲಿಯೇ ಕೊಂಡೊಯ್ಯಲಾಗುತ್ತದೆ. ಅಂತ್ಯಕ್ರಿಯೆ ಲೋದಿ ರಸ್ತೆಯಲ್ಲಿರುವ ಚಿತಾಗಾರದಲ್ಲಿ ನಡೆಯಲಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…