Featured

ಪ್ರಣವ್‌ ಮುಖರ್ಜಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ -Vishwanews24

ಪ್ರಣವ್‌ ಮುಖರ್ಜಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ -Vishwanews24

ನವದೆಹಲಿ : ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣವ್ ಮುಖರ್ಜಿ ಅವರ ಅಂತ್ಯ ಸಂಸ್ಕಾರವು ಸೇನೆಯ ಸಕಲ ಗೌರವಗಳೊಂದಿಗೆ ಮಂಗಳವಾರ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಣವ್ ನಿವಾಸಕ್ಕೆ ಭೇಟಿ ನೀಡಿ ಮಾಜಿ ರಾಷ್ಟ್ರಪತಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಪ್ರಣವ್ ನಿಧನದ ಕಾರಣ ಆಗಸ್ಟ್ 31 ರಿಂದ ಸೆಪ್ಟೆಂಬರ್ 6 ರವರೆಗೆ ದೇಶದಾದ್ಯಂತ ಶೋಕಾಚರಣೆ ಇರಲಿದೆ ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 84 ವರ್ಷ ಪ್ರಾಯದ ಪ್ರಣಬ್‌ ಮುಖರ್ಜಿ ಅವರು ಮೆದುಳು ಚಿಕತ್ಸೆಯ ಬಳಿಕ ಕೋಮಾಕ್ಕೆ ಜಾರಿದ್ದು ಸೋಮವಾರ ಕೊನೆಯುಸಿರೆಳೆದಿದ್ದಾರೆ. ಚಿಕಿತ್ಸೆಗೂ ಮುನ್ನ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು.

ಅಂತಿಮ ಕ್ರಿಯೆಗೂ ಮುನ್ನ ಪ್ರಣವ್ ಅವರ ಪಾರ್ಥಿವ ಶರೀರದ ದರ್ಶನಕ್ಕಾಗಿ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಅವರ ಅಧಿಕೃತ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಕೊರೊನಾ ಮಾರ್ಗಸೂಚಿಯಂತೆ ಅಂತಿಮ ವಿಧಿಗಾಗಿ ಮೃತದೇಹವನ್ನು ತೆರೆದ ವಾಹನದ ಬದಲು ಶವ ಸಾಗಾಟ ವಾಹನದಲ್ಲಿಯೇ ಕೊಂಡೊಯ್ಯಲಾಗುತ್ತದೆ. ಅಂತ್ಯಕ್ರಿಯೆ ಲೋದಿ ರಸ್ತೆಯಲ್ಲಿರುವ ಚಿತಾಗಾರದಲ್ಲಿ ನಡೆಯಲಿದೆ.

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

10 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

10 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

10 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

11 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

11 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

11 hours ago