Featured

ಪ್ರತಿನಿತ್ಯ ಮೊಸರು ಸೇವಿಸುತ್ತೀರಾ…?? ಹಾಗಾದರೆ ವೃದ್ಧಿಸಿ ನಿಮ್ಮ ಆರೋಗ್ಯ.. Vishwanews24

ಮೊಸರಿಲ್ಲದೆ ಊಟ ಊಟವೇ ಅಲ್ಲ,ಆರೋಗ್ಯ ದೃಷ್ಟಿಯಿಂದ ಮೊಸರು ಬಹಳ ಉಪಯೋಗಕಾರಿ.ಒಳ್ಳೆಯ ಮೊಸರು ಸಿಗೋದು ತುಂಬಾ ಕಷ್ಟ ಆದರೆ ನಿಮ್ಮ ಮನೆಯಲ್ಲಿನ ಹಿರಿಯರನ್ನು ಕೇಳಿ ನೋಡಿ ಮೊಸರು ಇಲ್ಲದೆ ಎಂದಾದ್ರೂ ಊಟ ಮಾಡಿದ್ರಾ ಅಂತ ಖಂಡಿತ ಇಲ್ಲ ಅಂತ ಹೇಳ್ತಾರೆ.ಅಂದಿನ ದಿನಗಳಲ್ಲಿ ಊಟದಲ್ಲಿ ಮೊಸರು ಇರಲೇಬೇಕು.

ಮೊಸರಿಲ್ಲದೆ ಊಟ ಮಾಡುತ್ತಿರಲಿಲ್ಲ ಆದರೆ ಈಗ ವಾರದಲ್ಲಿ ಎಷ್ಟು ದಿನ ಮೊಸರು ಸೇವಿಸುತ್ತಿದ್ದೇವೆ ?

ಅಷ್ಟಕ್ಕೂ ಮೊಸರಿನೊಂದಿಗೆ ಊಟವನ್ನು ಮುಗಿಸೋದು ನೂರಾರು ವರ್ಷಗಳಿಂದ ಇರುವ ಪದ್ಧತಿ.ಮೊಸರನ್ನು ಬಳಸುವುದರಿಂದ ಆರೋಗ್ಯಕ್ಕೆ ಎಷ್ಟೋ ಅನುಕೂಲಗಳಿವೆ .ಪ್ರತಿದಿನ ಮೊಸರು ತಿಂದರೆ ಅದರಿಂದಾಗುವ ಉಪಯೋಗಗಳನ್ನು ಹೇಳ್ತೀವಿ ಓದಿ.ಮೊಸರಿನಲ್ಲಿ ಕ್ಯಾಲ್ಷಿಯಂ,ವಿಟಮಿನ್ ಡಿ,ಪ್ರೊಟೀನ್,ಗಡ್ ಬ್ಯಾಕ್ಟಿರಿಯಾ ಇರುತ್ತದೆ ಬೇರೆ ಆಹಾರಗಳಿಂದ ವಿಟಮಿನ್ಸ್ ಮತ್ತು ಮಿನರಲ್ಸ್ ಹೀರಿಕೊಳ್ಳಲು ದೇಹಕ್ಕೆ ಸಹಾಯ ಮಾಡುತ್ತೆ.ಮೊಸರನ್ನ ಮಜ್ಜಿಗೆ ಮಾಡಿ ಅಥವಾ ಲಸ್ಸಿ ಮಾಡಿ ಕುಡಿಯುವುದರಿಂದ ಹೊಟ್ಟೆಯಲ್ಲಿನ ಶಾಖಾ ಕಡಿಮೆಯಾಗುತ್ತೆ.ಹೊಟ್ಟೆ ನೋಯುತ್ತಿದ್ದರೆ,ಅನೇಕ ಬಾರಿ ಶೌಚಾಲಯಕ್ಕೆ ಹೋಗ್ತಾ ಇದ್ರೆ ಮೊಸರಿಗೆ ಇದಕ್ಕಾಗಿ ಕುಡಿಯಬೇಕು ಮೊಸರಿನಲ್ಲಿ ಈಸೆಬ್ ಗುಲ್ ಹಾಕಿ ಕುಡಿಯಬೇಕು.

ಮೊಸರಿನಲ್ಲಿ ಗಡ್ ಬ್ಯಾಕ್ಟೀರಿಯಾ ಇರೋದ್ರಿಂದ ಕ್ರಿಮಿಗಳ ಜೊತೆಗೆ ಹೋರಾಡುತ್ತೆ.ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಇದು ಸಹಾಯ ಮಾಡುತ್ತದೆ.ಯೀಸ್ಟ್ ಇನ್ಫೆಕ್ಷನ್ ನಿಂದ ತೊಂದರೆ ಅನುಭವಿಸುತ್ತಿರುವ ಮಹಿಳೆಯರಿಗೆ ಇದು ಎಷ್ಟೋ ಉಪಯೋಗಕಾರಿ.ಮೊಸರಿನಲ್ಲಿ ಕ್ಯಾಲ್ಷಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಮೂಳೆಗಳ ಆರೋಗ್ಯ ಹೆಚ್ಚುತ್ತದೆ.

ಮೊಸರಿನಿಂದ ಆಗುವ ಉಪಯೋಗಗಳು.

1.ಹಸಿವು ಹಾಗೂ ನಿಶಕ್ತಿಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ನಿಯಮಿತವಾಗಿ ಮೊಸರನ್ನು ಸೇವಿಸುವ ಮೂಲಕ ರಕ್ತಪರಿಚಲನೆ ಸರಾಗವಾಗಿ ಆಗುತ್ತದೆ ಹಾಗೂ ದೇಹದಲ್ಲಿ ನಿಶಕ್ತಿಯಾಗದಂತೆ ತಡೆಯುತ್ತದೆ. ಹಾಲು ಮೊಸರಾಗುವ ಸಮಯದಲ್ಲಿ ಹಾಲಿನಲ್ಲಿರುವ ಸಕ್ಕರೆಗಳು ಒಡೆದು ಒಂದು ಬಗೆಯ ಆಮ್ಲವಾಗಿ ಪರಿವರ್ತಿತವಾಗುತ್ತದೆ. ಈ ಆಮ್ಲವೇ ಮೊಸರಿನ ಹುಳಿಯಾದ ರುಚಿಗೆ ಕಾರಣವಾಗಿದ್ದು ಇದು ಜೀರ್ಣಿಸಿಕೊಳ್ಳಲು ಸುಲಭವಾಗಿದೆ. ಹಸಿವು ಹಾಗೂ ನಿಶಕ್ತಿಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮೊಸರು ಅತ್ಯುತ್ತಮವಾದ ಆಹಾರವಾಗಿದೆ.

2.ಕರುಳು ಹಾಗೂ ಜಠರದ ತೊಂದರೆಗಳಿಗೆ ರಾಮಬಾಣ ನಿತ್ಯವೂ ಮೊಸರನ್ನು ಆಹಾರದ ಒಂದು ಭಾಗವಾಗಿ ಸೇವಿಸುವ ವ್ಯಕ್ತಿಗಳಲ್ಲಿ ಕರುಳು ಹಾಗೂ ಜಠರದ ತೊಂದರೆಗಳು ಆವರಿಸುವ ಸಾಧ್ಯತೆ ಇತರ ವ್ಯಕ್ತಿಗಳಿಗಿಂತ ಕಡಿಮೆ ಇರುತ್ತದೆ. ಒಂದು ವೇಳೆ ಹೊಟ್ಟೆಯೊಳಗೆ ಬಿಸಿಯಾಗಿರುವಂತೆ ಅನ್ನಿಸಿದರೆ ಬಿಳಿ ಅನ್ನಕ್ಕೆ ಮೊಸರು ಕಲಸಿಕೊಂಡು ಸೇವಿಸಬೇಕು

 

3.ಮೂಳೆಗಳ ಆರೋಗ್ಯಕ್ಕೆ ಮೂಳೆಗಳನ್ನು ದೃಢಗೊಳಿಸಲು ಹಾಲಿಗಿಂತಲೂ ಮೊಸರು ಉತ್ತಮ ಆಯ್ಕೆಯಾಗಿದೆ. ಏಕೆಂದರೆ ಹಾಲಿನಲ್ಲಿರುವ ಕ್ಯಾಲ್ಸಿಯಂ ಅನ್ನು ನೇರವಾಗಿ ಪಡೆದುಕೊಳ್ಳಲು ನಮ್ಮ ದೇಹಕ್ಕೆ ಸಾಧ್ಯವಿಲ್ಲ. ಇದೇ ಕಾರಣಕ್ಕೆ ಜೇನನ್ನು ಸೇರಿಸಬೇಕಾಗುತ್ತದೆ. ಆದರೆ ಮೊಸರಿನಲ್ಲಿರುವ ಕ್ಯಾಲ್ಸಿಯಂ ಅನ್ನು ಜೇನಿನ ಅಗತ್ಯವಿಲ್ಲದೇ ದೇಹ ಹೀರಿಕೊಳ್ಳಲು ಸಾಧ್ಯ.

4.ಹೃದಯದ ಕಾಯಿಲೆ, ಅಧಿಕ ರಕ್ತದೊತ್ತಡಕ್ಕೆಲ್ಲಾ ರಾಮಬಾಣ ಮೊಸರಿನ ಸೇವನೆಯಿಂದ ಹೃದಯದ ಕಾಯಿಲೆ, ಅಧಿಕ ರಕ್ತದೊತ್ತಡಗಳಿಂದ ರಕ್ಷಣೆ ದೊರಕುತ್ತದೆ. ಅಲ್ಲದೇ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಿ ಈ ಮೂಲಕ ಹೃದಯದ ಬಡಿತದ ವೇಗ ಹಾಗೂ ಒತ್ತಡವನ್ನೂ ನಿಯಂತ್ರಿಸುತ್ತದೆ.

5.ಮೂಲವ್ಯಾಧಿಯ ಸಮಸ್ಯೆಗೆ ಮೂಲವ್ಯಾಧಿಯ ಕಾರಣ ಆಸನಭಾಗದಲ್ಲಿ ಗಂಟುಗಳಾಗಿರುವ (hemoಡಿಡಿhoiಜs) ವ್ಯಕ್ತಿಗಳಿಗೆ ಮೊಸರನ್ನು ನೀರಾಗಿಸಿ ಇದರಲ್ಲಿ ಕೆಲವು ನೆನೆಸಿಟ್ಟ ಪಿಸ್ತಾಗಳನ್ನು ಅರೆದು ಕುಡಿಯುವ ಮೂಲಕ ನೋವಿನಿಂದ ಮುಕ್ತಿ ದೊರಕುತ್ತದೆ.

6.ನಿದ್ರಾಹೀನತೆಯಿಂದ ಬಳಲುವ ವ್ಯಕ್ತಿಗಳಿಗೆ ನಿದ್ರಾಹೀನತೆಯಿಂದ ಬಳಲುವ ವ್ಯಕ್ತಿಗಳು ರಾತ್ರಿ ಮಲಗುವ ಮುನ್ನ ಮೊಸರನ್ನು ಸೇವಿಸಿ ಮಲಗಬೇಕು

7.ಬಾಯಿಯ ಹುಣ್ಣು ಸನಸ್ಯೆಯಿಂದ ಬಳಲುತ್ತಿದ್ದರೆ ಒಂದು ವೇಳೆ ಸತತವಾಗಿ ಬಾಯಿಯ ಹುಣ್ಣು ಅಥವಾ ಮೌಥ್ ಅಲ್ಸರ್ ನಿಂದ ಬಳಲುತ್ತಿದ್ದರೆ ರಾತ್ರಿ ಮಲಗುವ ಮುನ್ನ ಮತ್ತು ಬೆಳಿಗ್ಗೆದ್ದ ತಕ್ಷಣ ಗಟ್ಟಿ ಮೊಸರನ್ನು ಬಾಯಿಯ ಒಳಭಾಗದಲ್ಲಿ ಸವರಿಕೊಂಡರೆ ಶೀಘ್ರವೇ ಗುಣವಾಗುತ್ತದೆ.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago