ಮೀರತ್: ಮುಸ್ಲಿಮರ ಮತಗಳು ವಿಭಜನೆಯಾಗದಿರಲಿ, ಮುಸ್ಲಿಮರೆಲ್ಲರೂ ಬಿಎಸ್ಪಿ-ಎಸ್ಪಿ ಮೈತ್ರಿಯನ್ನು ಬೆಂಬಲಿಸಿ ಎಂದು ಬಹಿರಂಗವಾಗಿಯೇ ಕೋಮು ಧ್ರುವೀಕರಣಕ್ಕೆ ಕರೆ ನೀಡಿದ ಮಾಯಾವತಿ ಅವರ ಹೇಳಿಕೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿರುಗೇಟು ನೀಡಿದ್ದಾರೆ.
‘ಸಹಾರಣ್ಪುರದಲ್ಲಿ ನಿನ್ನೆ ಮಾಯಾವತಿ ಮಾತಾಡಿರುವುದನ್ನು ನೀವು ಕೇಳಿರಲೇಬೇಕು. ನಾವು (ಮಹಾಘಟಬಂಧನ್) ಮುಸ್ಲಿಮರ ಮತಗಳನ್ನು ಪಡೆದರೆ, ಉಳಿದವರ ಬೆಂಬಲ ಅಗತ್ಯವಿಲ್ಲ ಎಂದು ಮಾಯಾವತಿ ಹೇಳಿದ್ದರು. ನಾನೂ ಸಹ ಅದೇ ರೀತಿ ಹೇಳಬಯಸುತ್ತೇನೆ, ಕಾಂಗ್ರೆಸ್, ಎಸ್ಪಿ, ಬಿಎಸ್ಪಿಗಳು ಆಲಿಯಲ್ಲಿ ನಂಬಿಕೆ ಇರಿಸಿದ್ದರೆ ನಾವು ಬಜರಂಗಬಲಿಯಲ್ಲಿ ನಂಬಿಕೆ ಹೊಂದಿದ್ದೇವೆ’ ಎಂದು ಮೀರತ್ನಲ್ಲಿ ಮಂಗಳವಾರ ನಡೆದ ರ್ಯಾಲಿಯಲ್ಲಿ ಯೋಗಿ ಹೇಳಿದರು.
ಬಿಎಸ್ಪಿ ವರಿಷ್ಠೆ ಮಾಯಾವತಿ ಮುಸ್ಲಿಂ ಮತ ಸೆಳೆಯಲು ದಲಿತರ ಭಾವನೆಯೊಂದಿಗೆ ಆಟವಾಡುತ್ತಿದ್ದಾರೆ. ಮುಸ್ಲಿಂ ಸಮುದಾಯ ಮತ್ತು ದಲಿತರು ಒಗ್ಗಟ್ಟಾಗಿರಲು ಯಾವತ್ತೂ ಸಾಧ್ಯವಿಲ್ಲ. ಮುಸ್ಲಿಮರು ವಿರೋಧ ಪಕ್ಷಗಳಿಗೆ ಮಾತ್ರ ಮತ ಹಾಕಬೇಕೆಂದು ಮಾಯಾವತಿ ಹೇಳಿದ್ದಾರೆ. ಈ ಮಾತಿನ ಅರ್ಥ ಏನು? ಹಾಗಿದ್ದರೆ ಹಿಂದೂಗಳಿಗೆ ಬಿಜೆಪಿಗೆ ಓಟು ಹಾಕದೆ ಬೇರೆ ದಾರಿಯಿಲ್ಲ ಎಂದು ಮಾಯಾವತಿ ವಿರುದ್ಧ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.
‘ಈ ಪಕ್ಷಗಳು ಬಜರಂಗಬಲಿಯ ಅನುಯಾಯಿಗಳನ್ನು ಎಂದೂ ಸಹಿಸಿಕೊಳ್ಳುವುದಿಲ್ಲ ಎಂಬುನ್ನು ಸ್ಪಷ್ಟವಾಗಿಯೇ ಸಾರಿವೆ. ಹೀಗಾಗಿಯೇ ಅವರು ‘ಆಲಿ ಆಲಿ’ ಎಂದು ವೇದಿಕೆಯ ಮೇಲಿನಿಂದ ಪದೇ ಪದೇ ಹೇಳುತ್ತ ದೇಶಾದ್ಯಂತ ಹಸಿರು ವೈರಸ್ ಅನ್ನು ಹಬ್ಬಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…