Featured

ಪ್ರತಿಪಕ್ಷಗಳು ‘ಆಲಿ’ಯನ್ನು ನಂಬುವುದಾದರೆ ; ನಾವು ‘ಬಜರಂಗ ಬಲಿ’ಯನ್ನು ನಂಬುತ್ತೇವೆ : ಯೋಗಿ ಆದಿತ್ಯನಾಥ್ – Vishwanews24

ಮೀರತ್‌: ಮುಸ್ಲಿಮರ ಮತಗಳು ವಿಭಜನೆಯಾಗದಿರಲಿ, ಮುಸ್ಲಿಮರೆಲ್ಲರೂ ಬಿಎಸ್‌ಪಿ-ಎಸ್‌ಪಿ ಮೈತ್ರಿಯನ್ನು ಬೆಂಬಲಿಸಿ ಎಂದು ಬಹಿರಂಗವಾಗಿಯೇ ಕೋಮು ಧ್ರುವೀಕರಣಕ್ಕೆ ಕರೆ ನೀಡಿದ ಮಾಯಾವತಿ ಅವರ ಹೇಳಿಕೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿರುಗೇಟು ನೀಡಿದ್ದಾರೆ.

ಅವರು (ಪ್ರತಿಪಕ್ಷಗಳು) ‘ಆಲಿ’ಯನ್ನು ನಂಬುವುದಾದರೆ, ನಾವು (ಬಿಜೆಪಿ) ‘ಬಜರಂಗ ಬಲಿ’ಯನ್ನು ನಂಬುತ್ತೇವೆ ಎಂದು ಯೋಗಿ ನುಡಿದರು. ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಸಮಾಜದಲ್ಲಿ ಹಸಿರುವ ವೈರಸ್ ಹರಡುತ್ತಿವೆ ಎಂದು ಯೋಗಿ ಆರೋಪಿಸಿದರು.

‘ಸಹಾರಣ್‌ಪುರದಲ್ಲಿ ನಿನ್ನೆ ಮಾಯಾವತಿ ಮಾತಾಡಿರುವುದನ್ನು ನೀವು ಕೇಳಿರಲೇಬೇಕು. ನಾವು (ಮಹಾಘಟಬಂಧನ್) ಮುಸ್ಲಿಮರ ಮತಗಳನ್ನು ಪಡೆದರೆ, ಉಳಿದವರ ಬೆಂಬಲ ಅಗತ್ಯವಿಲ್ಲ ಎಂದು ಮಾಯಾವತಿ ಹೇಳಿದ್ದರು. ನಾನೂ ಸಹ ಅದೇ ರೀತಿ ಹೇಳಬಯಸುತ್ತೇನೆ, ಕಾಂಗ್ರೆಸ್, ಎಸ್‌ಪಿ, ಬಿಎಸ್ಪಿಗಳು ಆಲಿಯಲ್ಲಿ ನಂಬಿಕೆ ಇರಿಸಿದ್ದರೆ ನಾವು ಬಜರಂಗಬಲಿಯಲ್ಲಿ ನಂಬಿಕೆ ಹೊಂದಿದ್ದೇವೆ’ ಎಂದು ಮೀರತ್‌ನಲ್ಲಿ ಮಂಗಳವಾರ ನಡೆದ ರ‍್ಯಾಲಿಯಲ್ಲಿ ಯೋಗಿ ಹೇಳಿದರು.

ಬಿಎಸ್​ಪಿ ವರಿಷ್ಠೆ ಮಾಯಾವತಿ ಮುಸ್ಲಿಂ ಮತ ಸೆಳೆಯಲು ದಲಿತರ ಭಾವನೆಯೊಂದಿಗೆ ಆಟವಾಡುತ್ತಿದ್ದಾರೆ. ಮುಸ್ಲಿಂ ಸಮುದಾಯ ಮತ್ತು ದಲಿತರು ಒಗ್ಗಟ್ಟಾಗಿರಲು ಯಾವತ್ತೂ ಸಾಧ್ಯವಿಲ್ಲ. ಮುಸ್ಲಿಮರು ವಿರೋಧ ಪಕ್ಷಗಳಿಗೆ ಮಾತ್ರ ಮತ ಹಾಕಬೇಕೆಂದು ಮಾಯಾವತಿ ಹೇಳಿದ್ದಾರೆ. ಈ ಮಾತಿನ ಅರ್ಥ ಏನು? ಹಾಗಿದ್ದರೆ ಹಿಂದೂಗಳಿಗೆ ಬಿಜೆಪಿಗೆ ಓಟು ಹಾಕದೆ ಬೇರೆ ದಾರಿಯಿಲ್ಲ ಎಂದು ಮಾಯಾವತಿ ವಿರುದ್ಧ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.

‘ಈ ಪಕ್ಷಗಳು ಬಜರಂಗಬಲಿಯ ಅನುಯಾಯಿಗಳನ್ನು ಎಂದೂ ಸಹಿಸಿಕೊಳ್ಳುವುದಿಲ್ಲ ಎಂಬುನ್ನು ಸ್ಪಷ್ಟವಾಗಿಯೇ ಸಾರಿವೆ. ಹೀಗಾಗಿಯೇ ಅವರು ‘ಆಲಿ ಆಲಿ’ ಎಂದು ವೇದಿಕೆಯ ಮೇಲಿನಿಂದ ಪದೇ ಪದೇ ಹೇಳುತ್ತ ದೇಶಾದ್ಯಂತ ಹಸಿರು ವೈರಸ್‌ ಅನ್ನು ಹಬ್ಬಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago