ಮೀರತ್: ಮುಸ್ಲಿಮರ ಮತಗಳು ವಿಭಜನೆಯಾಗದಿರಲಿ, ಮುಸ್ಲಿಮರೆಲ್ಲರೂ ಬಿಎಸ್ಪಿ-ಎಸ್ಪಿ ಮೈತ್ರಿಯನ್ನು ಬೆಂಬಲಿಸಿ ಎಂದು ಬಹಿರಂಗವಾಗಿಯೇ ಕೋಮು ಧ್ರುವೀಕರಣಕ್ಕೆ ಕರೆ ನೀಡಿದ ಮಾಯಾವತಿ ಅವರ ಹೇಳಿಕೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿರುಗೇಟು ನೀಡಿದ್ದಾರೆ.
‘ಸಹಾರಣ್ಪುರದಲ್ಲಿ ನಿನ್ನೆ ಮಾಯಾವತಿ ಮಾತಾಡಿರುವುದನ್ನು ನೀವು ಕೇಳಿರಲೇಬೇಕು. ನಾವು (ಮಹಾಘಟಬಂಧನ್) ಮುಸ್ಲಿಮರ ಮತಗಳನ್ನು ಪಡೆದರೆ, ಉಳಿದವರ ಬೆಂಬಲ ಅಗತ್ಯವಿಲ್ಲ ಎಂದು ಮಾಯಾವತಿ ಹೇಳಿದ್ದರು. ನಾನೂ ಸಹ ಅದೇ ರೀತಿ ಹೇಳಬಯಸುತ್ತೇನೆ, ಕಾಂಗ್ರೆಸ್, ಎಸ್ಪಿ, ಬಿಎಸ್ಪಿಗಳು ಆಲಿಯಲ್ಲಿ ನಂಬಿಕೆ ಇರಿಸಿದ್ದರೆ ನಾವು ಬಜರಂಗಬಲಿಯಲ್ಲಿ ನಂಬಿಕೆ ಹೊಂದಿದ್ದೇವೆ’ ಎಂದು ಮೀರತ್ನಲ್ಲಿ ಮಂಗಳವಾರ ನಡೆದ ರ್ಯಾಲಿಯಲ್ಲಿ ಯೋಗಿ ಹೇಳಿದರು.
ಬಿಎಸ್ಪಿ ವರಿಷ್ಠೆ ಮಾಯಾವತಿ ಮುಸ್ಲಿಂ ಮತ ಸೆಳೆಯಲು ದಲಿತರ ಭಾವನೆಯೊಂದಿಗೆ ಆಟವಾಡುತ್ತಿದ್ದಾರೆ. ಮುಸ್ಲಿಂ ಸಮುದಾಯ ಮತ್ತು ದಲಿತರು ಒಗ್ಗಟ್ಟಾಗಿರಲು ಯಾವತ್ತೂ ಸಾಧ್ಯವಿಲ್ಲ. ಮುಸ್ಲಿಮರು ವಿರೋಧ ಪಕ್ಷಗಳಿಗೆ ಮಾತ್ರ ಮತ ಹಾಕಬೇಕೆಂದು ಮಾಯಾವತಿ ಹೇಳಿದ್ದಾರೆ. ಈ ಮಾತಿನ ಅರ್ಥ ಏನು? ಹಾಗಿದ್ದರೆ ಹಿಂದೂಗಳಿಗೆ ಬಿಜೆಪಿಗೆ ಓಟು ಹಾಕದೆ ಬೇರೆ ದಾರಿಯಿಲ್ಲ ಎಂದು ಮಾಯಾವತಿ ವಿರುದ್ಧ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.
‘ಈ ಪಕ್ಷಗಳು ಬಜರಂಗಬಲಿಯ ಅನುಯಾಯಿಗಳನ್ನು ಎಂದೂ ಸಹಿಸಿಕೊಳ್ಳುವುದಿಲ್ಲ ಎಂಬುನ್ನು ಸ್ಪಷ್ಟವಾಗಿಯೇ ಸಾರಿವೆ. ಹೀಗಾಗಿಯೇ ಅವರು ‘ಆಲಿ ಆಲಿ’ ಎಂದು ವೇದಿಕೆಯ ಮೇಲಿನಿಂದ ಪದೇ ಪದೇ ಹೇಳುತ್ತ ದೇಶಾದ್ಯಂತ ಹಸಿರು ವೈರಸ್ ಅನ್ನು ಹಬ್ಬಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…