ಬೆಳಗಾವಿ: ಪ್ರತಿಪಕ್ಷಗಳ ತೀವ್ರ ವಿರೋಧದ, ಗದ್ದಲದ ನಡುವೆಯೂ ಮಂಗಳವಾರ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು ಮಂಗಳವಾರ ಮಂಡಿಸಲಾಯಿತು. ಭೋಜನ ನಂತರ ಕಲಾಪದ ಬಳಿಕ ವಿಧೇಯಕವನ್ನು ದಿಢೀರ್ ವಿಧೇಯಕ ಮಂಡಿಸಲಾಗಿದೆ.
ಕಾಂಗ್ರೆಸ್ ವಿರೋಧಿಸುತ್ತಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಮಸೂದೆ ಮಂಡಿಸಲು ಮುಂದಾದರು. ಈ ವೇಳೆ ಮಸೂದೆ ಮಂಡನೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು.
ಮತಾಂತರ ನಿಷೇಧ ವಿಧೇಯಕದಲ್ಲಿ ಇರುವ ಪ್ರಮುಖ ಅಂಶಗಳೇನು?
* ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.
* ವ್ಯಕ್ತಿಯು ಆತನ ನಿಕಟ ಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆಂದು ಪರಿಗಣಿಸಲಾಗುವುದಿಲ್ಲ
* ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ.
* ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ ವಸೂಲಾತಿಗೆ ಅವಕಾಶವಿದೆ.
* ಅಪ್ರಾಪ್ತರು, ಬುದ್ದಿಮಾಂದ್ಯ ವ್ಯಕ್ತಿಗಳು, ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ. ಅಷ್ಟೇ ಅಲ್ಲದೆ 50 ಸಾವಿರ ದಂಡ ವಸೂಲಿಗೂ ಅವಕಾಶವಿದೆ.
* ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ.
* ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ದಂಡ ವಸೂಲಿಗೂ ಅವಕಾಶವಿದೆ.
* ಮತಾಂತರದ ಉದ್ದೇಶದ ಆದ ಮದುವೆಯನ್ನು ಅಸಿಂಧುವೆಂದು ಘೋಷಿಸಲು ನ್ಯಾಯಾಲಯಕ್ಕೆ ಅವಕಾಶ ನೀಡಲಾಗಿದೆ.
ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಿದೆ ನಿಯಮಾವಳಿಗಳು
* ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಮೂವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.
* ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.
* ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ 30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.
* ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.
* ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.
* ಅಪರಾಧಕ್ಕೆ ನೆರವು ಹಾಗೂ ದುಷ್ಪ್ರೇರಣೆ ನೀಡಿ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…