ಪ್ರತಿಭಟನೆಯನ್ನು ನೈತಿಕವಾಗಿ ಎದುರಿಸಲಾಗದ ಸರ್ಕಾರ ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ : ದಿನೇಶ್‌ ಗುಂಡೂರಾವ್ -Vishwanews24

Featured, ರಾಜ್ಯ ನ್ಯೂಸ್

ಪ್ರತಿಭಟನೆಯನ್ನು ನೈತಿಕವಾಗಿ ಎದುರಿಸಲಾಗದ ಸರ್ಕಾರವೊಂದು ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ : ದಿನೇಶ್‌ ಗುಂಡೂರಾವ್ -Vishwanews24

ಇದು ಈ ಸರ್ಕಾರದ ಅಂತ್ಯದ ಆರಂಭ..

ಬೆಂಗಳೂರು: ಸದ್ಯ ಕೇಂದ್ರ ಸರ್ಕಾರವೂ ಇದೇ ಹೇಡಿ ಮಾರ್ಗ ಅನುಸರಿಸಿ ಪ್ರತಿಭಟನೆಯ ದನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಈ ಸರ್ಕಾರದ ಅಂತ್ಯದ ಆರಂಭವಷ್ಟೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಒಂದು ಪ್ರತಿಭಟನೆ ಹಾಗೂ ಟೀಕೆಯನ್ನು ಸೈದ್ಧಾಂತಿಕವಾಗಿ ಹಾಗೂ ನೈತಿಕವಾಗಿ ಎದುರಿಸಲಾಗದ ಸರ್ಕಾರವೊಂದು ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ ಎಂದು ಸರಣಿ ಟ್ವೀಟ್‌ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಗುಂಡೂರಾವ್‌ ವಾಗ್ದಾಳಿ ನಡೆಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವಂತೆ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ನಿಯಂತ್ರಣಕ್ಕೆ ಕಾನೂನು : ನಳಿನ್ ಕುಮಾರ್ ಕಟೀಲ್ -Vishwanews24