ನವದೆಹಲಿ: ಸೈನಿಕರ ನೇಮಕಾತಿಯ ಹೊಸ ನೀತಿ ‘ಅಗ್ನಿಪಥ ಯೋಜನೆ’ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ. ಇದರ ನಡುವೆಯೇ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಹಾಗೂ ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ‘ಅಗ್ನಿವೀರ’ರಿಗೆ ಶೇ 10ರಷ್ಟು ಮೀಸಲಾತಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಸಂಬಂಧ ಕೇಂದ್ರ ಗೃಹ ಇಲಾಖೆಯ ಟ್ವಿಟರ್ ಪುಟದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಮೀಸಲಾತಿ ಮಾತ್ರವಲ್ಲದೆ, ನೇಮಕಾತಿ ವೇಳೆ ಗರಿಷ್ಠ ವಯೋಮಿತಿಯಲ್ಲಿ ‘ಅಗ್ನಿವೀರ’ರಿಗೆ ಮೂರು ವರ್ಷಗಳ ಸಡಿಲಿಕೆ ನೀಡಲಾಗುತ್ತದೆ. ಮೊದಲ ಬ್ಯಾಚ್ನ ‘ಅಗ್ನಿವೀರ’ರಿಗೆ ಗರಿಷ್ಠ ವಯೋಮಿತಿಯಲ್ಲಿ ಐದು ವರ್ಷಗಳ ವರೆಗೆ ಸಡಿಲಿಕೆ ನೀಡಲಾಗುವುದು ಎಂದೂ ಹೇಳಲಾಗಿದೆ.
ಯುವಕರನ್ನು ಸೇನೆಗೆ ಅಲ್ಪಾವಧಿಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ ಯೋಜನೆ’ಯನ್ನು ಕೇಂದ್ರ ಸರ್ಕಾರವು ಮಂಗಳವಾರ (ಜೂನ್ 14) ಪ್ರಕಟಿಸಿತ್ತು. ಇದನ್ನು ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…