ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ : ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ -Vishwanews24

ಸುಳ್ಯ: ದೇಶದಲ್ಲಿ ಬದಲಾವಣೆಗಳು ಕೆಳ ಹಂತದಿಂದ ಆರಂಭವಾಗಬೇಕು. ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯಎಂದು ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಹೇಳಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್ ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸಾಮಾನ್ಯರು ಪತ್ರಕರ್ತರಲ್ಲಿ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ ಮೂಲಕ ಇಂಥ ಕಾರ್ಯಕ್ರಮಗಳು ನಡೆಯುತ್ತಿರುವುದು ಔಚಿತ್ಯಪೂರ್ಣ ಎಂದು ಅವರು ಹೇಳಿದರು. ಮಂಗಳೂರಿನಲ್ಲಿ ನಡೆದ ಘಟನೆಯ ಸಂದರ್ಭ ಮಾಧ್ಯಮಗಳು ಜವಾಬ್ದಾರಿ ಮಾಧ್ಯಮವಾಗಿ ಕೆಲಸ ಮಾಡಿದೆ ಎಂದು ಅವರು ಪ್ರಶಂಸಿದರು.

ವೈದ್ಯಕೀಯ ಶಿಬಿರವನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಕುತ್ಲೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನು ಅವರು ಬಿಡುಗಡೆಗೊಳಿಸಿದರು. ಮೂಲಭೂತ ಅಗತ್ಯಗಳಿಗೆ ಸಮರ್ಪಕವಾಗಿ ಯೋಜನೆಗಳನ್ನು ಮಾಡದಿರುವುದೇ ಕೆಲಸ ಪೂರ್ಣಗೊಳ್ಳದಿರಲು ಕಾರಣ. ಗ್ರಾಮಾಭಿವೃದ್ದಿಯ ಮೂಲಕ ದೇಶದ ಅಭಿವೃದ್ದಿ ಸಾಧ್ಯವಾಗಲಿ ಎಂದು ಆಶಿಸಿದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣ ಆರ್, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎಂಟಿ. ಹೊನ್ನಪ್ಪ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ವಿಕ್ರಂ ಅಮಾಟೆ, ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ಎಸ್.ಎನ್.ಮನ್ಮಥ, ತಾ.ಪಂ.ಉಪಾಧ್ಯಕ್ಷೆ ಶುಭದಾ ರೈ, ತಾ.ಪಂ.ಸದಸ್ಯ ಉದಯಕುಮಾರ್ ಕೊಪ್ಪಡ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಎ.ಪಿ.ಎಂ.ಸಿ. ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಂ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago