Featured

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಕೀಟನಾಶಕಗಳನ್ನು ತಯಾರಿಸಿ ರೈತರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ಜಾಗೃತ ದಳ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ.

ಮನೆಯೊಂದರಲ್ಲಿ ನಡೆಸಲಾಗುತ್ತಿದ್ದ ನಕಲಿ ಕೀಟನಾಶಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 200 ಲೀಟರ್‌ಗೂ ಹೆಚ್ಚು ವಿವಿಧ ಕೃಷಿ ರಾಸಾಯನಿಕಗಳು, ಪ್ಯಾಕಿಂಗ್ ಸಾಮಗ್ರಿ ಹಾಗೂ 11 ರಿಂದ 12 ಕಂಪನಿಗಳ ಹೆಸರಿನ ನಕಲಿ ಲೇಬಲ್‌ಗಳನ್ನ ವಶಪಡಿಸಿಕೊಂಡಿದ್ದಾರೆ.

ಆರೋಪಿ ಸೋಮಸುಂದರ್ ತಾನು ʻಬೆಳೆ ತಜ್ಞʼ ಎಂದು ಪರಿಚಯಿಸಿಕೊಂಡು ರೈತರ ವಿಶ್ವಾಸ ಗಳಿಸುತ್ತಿದ್ದ. ಬಳಿಕ ದಾಳಿಂಬೆ, ದ್ರಾಕ್ಷಿ, ಮಾವು ಸೇರಿದಂತೆ ತೋಟಗಾರಿಕಾ ಬೆಳೆ ಬೆಳೆಯುವ ರೈತರನ್ನು ಗುರಿಯಾಗಿಸಿಕೊಂಡು ನಕಲಿ ಕೀಟನಾಶಕಗಳನ್ನ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ತಾನೇ ಲೇಬಲ್‌ಗಳನ್ನ ಮುದ್ರಿಸಿ, ಬಾಟಲಿಗಳಿಗೆ ಅಂಟಿಸಿ, ಪ್ಯಾಕಿಂಗ್ ಮಾಡಿ ನೇರವಾಗಿ ರೈತರ ಜಮೀನುಗಳಿಗೆ ತೆರಳಿ ಮಾರಾಟ ಮಾಡುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ವೇಳೆ ನಕಲಿ ಲೇಬಲ್‌ಗಳ ಜೊತೆಗೆ ಜಿಎಸ್‌ಟಿ ಸಂಖ್ಯೆಯೂ ನಕಲಿಯಾಗಿರುವುದು ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಆರೋಪಿ ನಕಲಿ ಕೀಟನಾಶಕ ತಯಾರಿಸುತ್ತಿದ್ದುದನ್ನು ಒಪ್ಪಿಕೊಂಡಿದ್ದು, ಕಳೆದ ಮೂರು ದಿನಗಳಿಂದ ಮಾತ್ರ ಈ ಕೆಲಸ ಮಾಡುತ್ತಿದ್ದೇನೆ ಎಂದು ಸಮಜಾಯಿಷಿ ನೀಡಿದ್ದಾನೆ. ಆದರೆ ಈ ಜಾಲ ಎಷ್ಟು ದಿನಗಳಿಂದ ನಡೆಯುತ್ತಿತ್ತು, ಇನ್ನೂ ಎಷ್ಟು ರೈತರು ಮೋಸಕ್ಕೆ ಒಳಗಾಗಿದ್ದಾರೆ ಎಂಬ ಕುರಿತು ಕೃಷಿ ಇಲಾಖೆ ತನಿಖೆ ಮುಂದುವರಿಸಿದೆ.

ಅವಧಿ ಮೀರಿದ ಹಾಗೂ ವಿವಿಧ ರಾಸಾಯನಿಕಗಳನ್ನ ಮಿಶ್ರಣ ಮಾಡಿ ತಯಾರಿಸಿದ ನಕಲಿ ಕೀಟನಾಶಕಗಳು ಬೆಳೆಗಳ ಇಳುವರಿ ಕುಗ್ಗಿಸುವುದಲ್ಲದೇ, ಮಣ್ಣು, ಪರಿಸರ ಮತ್ತು ಆಹಾರ ಸರಪಳಿಯ ಮೇಲೂ ಗಂಭೀರ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ರೈತರು ಅಧಿಕೃತ ಪರವಾನಗಿ ಹೊಂದಿರುವ ಮಾರಾಟ ಕೇಂದ್ರಗಳಿಂದ ಮಾತ್ರ ಕೀಟನಾಶಕಗಳನ್ನ ಖರೀದಿಸಬೇಕು ಹಾಗೂ ಅನುಮಾನಾಸ್ಪದ ಉತ್ಪನ್ನಗಳ ಬಗ್ಗೆ ತಕ್ಷಣ ಕೃಷಿ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

5 seconds ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

10 minutes ago

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…

2 hours ago

ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು ಈಗ ಧರ್ಮೋಪದೇಶ ನೀಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ – vishwanews24

ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…

2 hours ago

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ – vishwanews24

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…

3 hours ago

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : 1.8 ಲಕ್ಷ ರೂ. ಪರಿಹಾರಕ್ಕೆ ಮುಂಬೈನ ಗ್ರಾಹಕ ನ್ಯಾಯಾಲಯ ಆದೇಶ – vishwanews24

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್‌ಲೈನ್‌ನಲ್ಲಿ ಲಕ್ಷಾಂತರ…

3 hours ago