ಬೆಂಗಳೂರು : ಕ್ರೀಡಾಕ್ಷೇತ್ರದ ಅತ್ಯುತ್ತಮ ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿರುವ ಕರ್ನಾಟಕದ ಹಿರಿಯ ಅಯಥ್ಲೀಟಿಕ್ ಕೋಚ್ ಪುರುಷೋತ್ತಮ ರೈ ಪ್ರಶಸ್ತಿ ಸ್ವೀಕರಿಸುವ ಒಂದು ದಿನ ಮುನ್ನ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಘೋಷಣೆಯಾದ ಕ್ರೀಡಾ ಪ್ರಶಸ್ತಿಯಲ್ಲಿ ಪುರುಷೋತ್ತಮ್ ಅವರು ದ್ರೋಣಾಚಾರ್ಯ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಅವರು ವಿಧಿವಶರಾಗಿದ್ದಾರೆ.
ಜೀವಮಾನದ ಸಾಧನೆಗಾಗಿ ಪುರುಷೋತ್ತಮ್ ರೈ ಅವರು ದ್ರೋಣಾಚಾರ್ಯ ಪ್ರಶಸ್ತಿಗೆ ಪಾತ್ರರಾಗಿದ್ದರು. 79 ವರ್ಷ ವಯಸ್ಸಿನ ಪುರುಷೋತ್ತಮ ರೈ ಸಾವಿರಾರು ಕ್ರೀಡಾಪಟುಗಳನ್ನು ರೂಪಿಸಿದ್ದರು. ಭಾನುವಾರ ನಡೆಯಲಿರುವ ವರ್ಚುವಲ್ ಕಾರ್ಯಕ್ರಮದಲ್ಲಿ ಪುರುಷೋತ್ತಮ ರೈ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿಯನ್ನು ಸ್ವೀಕರಿಸಬೇಕಾಗಿತ್ತು. ‘ಅವರು ರಾಷ್ಟ್ರ ಪ್ರಶಸ್ತಿಯ ಪಡೆಯುವ ಸಲುವಾಗಿ ಅದರ ಪೂರ್ವ ತಯಾರಿಯಲ್ಲಿ ಭಾಗಿಯಾಗಿದ್ದರು. ಆದರೆ ಅದಾದ ಬಳಿಕ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ’ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ಭಾರತದ ಜನಪ್ರಿಯ ಅಥ್ಲೀಟ್ಗಳಾಗಿ ಖ್ಯಾತರಾದ ಅಶ್ವಿನಿ ನಾಚಪ್ಪ, ಮುರಳಿ ಕುಟ್ಟನ್, ರೋಸ ಕುಟ್ಟಿ ಸೇರಿದಂತೆ ಅನೇಕ ಅಥ್ಲೀಟ್ಗಳಿಗೆ ಪುರುಷೋತ್ತಮ್ ರೈ ತರಭೇತಿ ನೀಡಿದ್ದರು. ಪುರುಷೋತ್ತಮ್ ರೈ ಅವರು 2001ರಲ್ಲಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(SAI) ಕೋಚ್ ಹುದ್ದೆಯಿಂದ ನಿವೃತ್ತರಾದರು. ಇವರ ಸಾಧನೆಗಾಗಿ ಅವರಿಗೆ ದ್ರೋಣಾಚಾರ್ಯ ಪ್ರಶಸ್ತಿ ಒಲಿದು ಬಂದಿತ್ತು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…