Featured

ಪ್ರತಿ ತಾಲೂಕಿಗೆ ನಾಲ್ಕು ಆಂಗ್ಲ ಮಾಧ್ಯಮ ಶಾಲೆ – Vishwanews24

ಬೆಂಗಳೂರು: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಸಾಹಿತ್ಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ 224 ವಿಧಾನಸಭಾ ಕ್ಷೇತ್ರಗಳ ಲೆಕ್ಕಾಚಾರದಲ್ಲಿ ಪ್ರತಿ ಕ್ಷೇತ್ರಕ್ಕೆ ತಲಾ ನಾಲ್ಕು ಶಾಲೆಗಳ ಆಯ್ಕೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದೆ. ಮುಂದಿನ 4 ವರ್ಷಗಳಲ್ಲಿ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಿಸಿರುವಂತೆ 1ರಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಲ್ಲಿ ಆರಂಭಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.

ಕ್ಷೇತ್ರಕ್ಕೆ 4ರಂತೆ ಲೆಕ್ಕ ಹಾಕಿದಾಗ ರಾಜ್ಯಾದ್ಯಂತ ಒಟ್ಟು 896 ಶಾಲೆಗಳಾಗಲಿವೆ. 1 ಸಾವಿರ ಶಾಲೆಗಳಿಗೆ 104 ಕೊರತೆ ಆಗುವುದರಿಂದ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಾಲೆ ತೆರೆದು ಸರಿದೂಗಿಸಲು ನಿರ್ಧರಿಸಲಾಗಿದೆ.ಕಳೆದ 1 ವರ್ಷದಿಂದಲೇ ರಾಜ್ಯದಲ್ಲಿ 275 ಕರ್ನಾಟಕ ಪಬ್ಲಿಕ್ ಶಾಲೆ ಕಾರ್ಯನಿರ್ವಹಿಸುತ್ತಿವೆ. ಕಳೆದ ವರ್ಷ ಆಯ್ಕೆ ಮಾಡುವಾಗ ಕೆಲವು ವಿಧಾನಸಭಾ ಕೇತ್ರದ ಶಾಸಕರು ತಮ್ಮ ವ್ಯಾಪ್ತಿಗೆ ಕಡಿಮೆ ಶಾಲೆಗಳು ಬಂದಿವೆ ಎಂದು ಗಲಾಟೆ ಮಾಡಿದ್ದರು.

ಇದೀಗ ಮೈತ್ರಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಎಲ್ಲ ಶಾಸಕರನ್ನು ಗಣನೆಗೆ ತೆಗೆದುಕೊಳ್ಳುವುದು ಮುಖ್ಯಮಂತ್ರಿ ಹಾಗೂ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವರೂ ಆಗಿರುವ ಎಚ್.ಡಿ.ಕುಮಾರಸ್ವಾಮಿಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರ ಸಮಾಧಾನಕ್ಕೆ ಹಾಗೂ ಸಾರ್ವಜನಿಕರಿಗೆ ಸಮಾನವಾಗಿ ಶಾಲೆ ಹಂಚಿಕೆ ಮಾಡಲು ಶಿಕ್ಷಣ ಇಲಾಖೆ ಪ್ರತಿ ಕ್ಷೇತ್ರಕ್ಕೆ 4 ಶಾಲೆ ಆಯ್ಕೆ ಮಾಡಲು ನಿರ್ಧರಿಸಿದೆ.

ಏನಿದು ಆಂಗ್ಲಶಾಲೆ?

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೂ ಒಂದೇ ಆವರಣದಲ್ಲಿ ಇರಲಿದೆ. ವಿದ್ಯಾರ್ಥಿಗಳು ಅರ್ಧಕ್ಕೆ ಶಾಲೆ ತೊರೆಯುವುದನ್ನು ತಪ್ಪಿಸುವ ಸಲುವಾಗಿ ಈ ರೀತಿ ಶಾಲೆ ತೆರೆಯಲು ನಿರ್ಧರಿಸಿದೆ.

ಒಂದು ಸಾವಿರ ಶಾಲೆಗಳ ಆಯ್ಕೆಗೆ ಸೂಚನೆ ನೀಡಲಾಗಿದೆ. ಆಂಗ್ಲ ಮಾಧ್ಯಮ ಬೋಧನಾ ಪಠ್ಯಕ್ರಮವನ್ನು ಪ್ರಾದೇಶಿಕ ಅಂಗ್ಲ ಕೇಂದ್ರ ರಚಿಸಲು ಮುಂದಾಗಿದೆ.

|ಪಿ.ಸಿ.ಜಾಫರ್, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

6 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

7 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

7 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

7 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

9 hours ago