ಬೆಂಗಳೂರು: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಸಾಹಿತ್ಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ 224 ವಿಧಾನಸಭಾ ಕ್ಷೇತ್ರಗಳ ಲೆಕ್ಕಾಚಾರದಲ್ಲಿ ಪ್ರತಿ ಕ್ಷೇತ್ರಕ್ಕೆ ತಲಾ ನಾಲ್ಕು ಶಾಲೆಗಳ ಆಯ್ಕೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದೆ. ಮುಂದಿನ 4 ವರ್ಷಗಳಲ್ಲಿ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಿಸಿರುವಂತೆ 1ರಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಲ್ಲಿ ಆರಂಭಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.
ಕ್ಷೇತ್ರಕ್ಕೆ 4ರಂತೆ ಲೆಕ್ಕ ಹಾಕಿದಾಗ ರಾಜ್ಯಾದ್ಯಂತ ಒಟ್ಟು 896 ಶಾಲೆಗಳಾಗಲಿವೆ. 1 ಸಾವಿರ ಶಾಲೆಗಳಿಗೆ 104 ಕೊರತೆ ಆಗುವುದರಿಂದ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಾಲೆ ತೆರೆದು ಸರಿದೂಗಿಸಲು ನಿರ್ಧರಿಸಲಾಗಿದೆ.ಕಳೆದ 1 ವರ್ಷದಿಂದಲೇ ರಾಜ್ಯದಲ್ಲಿ 275 ಕರ್ನಾಟಕ ಪಬ್ಲಿಕ್ ಶಾಲೆ ಕಾರ್ಯನಿರ್ವಹಿಸುತ್ತಿವೆ. ಕಳೆದ ವರ್ಷ ಆಯ್ಕೆ ಮಾಡುವಾಗ ಕೆಲವು ವಿಧಾನಸಭಾ ಕೇತ್ರದ ಶಾಸಕರು ತಮ್ಮ ವ್ಯಾಪ್ತಿಗೆ ಕಡಿಮೆ ಶಾಲೆಗಳು ಬಂದಿವೆ ಎಂದು ಗಲಾಟೆ ಮಾಡಿದ್ದರು.
ಇದೀಗ ಮೈತ್ರಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಎಲ್ಲ ಶಾಸಕರನ್ನು ಗಣನೆಗೆ ತೆಗೆದುಕೊಳ್ಳುವುದು ಮುಖ್ಯಮಂತ್ರಿ ಹಾಗೂ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವರೂ ಆಗಿರುವ ಎಚ್.ಡಿ.ಕುಮಾರಸ್ವಾಮಿಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರ ಸಮಾಧಾನಕ್ಕೆ ಹಾಗೂ ಸಾರ್ವಜನಿಕರಿಗೆ ಸಮಾನವಾಗಿ ಶಾಲೆ ಹಂಚಿಕೆ ಮಾಡಲು ಶಿಕ್ಷಣ ಇಲಾಖೆ ಪ್ರತಿ ಕ್ಷೇತ್ರಕ್ಕೆ 4 ಶಾಲೆ ಆಯ್ಕೆ ಮಾಡಲು ನಿರ್ಧರಿಸಿದೆ.
ಏನಿದು ಆಂಗ್ಲಶಾಲೆ?
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೂ ಒಂದೇ ಆವರಣದಲ್ಲಿ ಇರಲಿದೆ. ವಿದ್ಯಾರ್ಥಿಗಳು ಅರ್ಧಕ್ಕೆ ಶಾಲೆ ತೊರೆಯುವುದನ್ನು ತಪ್ಪಿಸುವ ಸಲುವಾಗಿ ಈ ರೀತಿ ಶಾಲೆ ತೆರೆಯಲು ನಿರ್ಧರಿಸಿದೆ.
ಒಂದು ಸಾವಿರ ಶಾಲೆಗಳ ಆಯ್ಕೆಗೆ ಸೂಚನೆ ನೀಡಲಾಗಿದೆ. ಆಂಗ್ಲ ಮಾಧ್ಯಮ ಬೋಧನಾ ಪಠ್ಯಕ್ರಮವನ್ನು ಪ್ರಾದೇಶಿಕ ಅಂಗ್ಲ ಕೇಂದ್ರ ರಚಿಸಲು ಮುಂದಾಗಿದೆ.
|ಪಿ.ಸಿ.ಜಾಫರ್, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…