ಬೆಂಗಳೂರು: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಸಾಹಿತ್ಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ 224 ವಿಧಾನಸಭಾ ಕ್ಷೇತ್ರಗಳ ಲೆಕ್ಕಾಚಾರದಲ್ಲಿ ಪ್ರತಿ ಕ್ಷೇತ್ರಕ್ಕೆ ತಲಾ ನಾಲ್ಕು ಶಾಲೆಗಳ ಆಯ್ಕೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದೆ. ಮುಂದಿನ 4 ವರ್ಷಗಳಲ್ಲಿ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಿಸಿರುವಂತೆ 1ರಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಲ್ಲಿ ಆರಂಭಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.
ಕ್ಷೇತ್ರಕ್ಕೆ 4ರಂತೆ ಲೆಕ್ಕ ಹಾಕಿದಾಗ ರಾಜ್ಯಾದ್ಯಂತ ಒಟ್ಟು 896 ಶಾಲೆಗಳಾಗಲಿವೆ. 1 ಸಾವಿರ ಶಾಲೆಗಳಿಗೆ 104 ಕೊರತೆ ಆಗುವುದರಿಂದ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಾಲೆ ತೆರೆದು ಸರಿದೂಗಿಸಲು ನಿರ್ಧರಿಸಲಾಗಿದೆ.ಕಳೆದ 1 ವರ್ಷದಿಂದಲೇ ರಾಜ್ಯದಲ್ಲಿ 275 ಕರ್ನಾಟಕ ಪಬ್ಲಿಕ್ ಶಾಲೆ ಕಾರ್ಯನಿರ್ವಹಿಸುತ್ತಿವೆ. ಕಳೆದ ವರ್ಷ ಆಯ್ಕೆ ಮಾಡುವಾಗ ಕೆಲವು ವಿಧಾನಸಭಾ ಕೇತ್ರದ ಶಾಸಕರು ತಮ್ಮ ವ್ಯಾಪ್ತಿಗೆ ಕಡಿಮೆ ಶಾಲೆಗಳು ಬಂದಿವೆ ಎಂದು ಗಲಾಟೆ ಮಾಡಿದ್ದರು.
ಇದೀಗ ಮೈತ್ರಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಎಲ್ಲ ಶಾಸಕರನ್ನು ಗಣನೆಗೆ ತೆಗೆದುಕೊಳ್ಳುವುದು ಮುಖ್ಯಮಂತ್ರಿ ಹಾಗೂ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವರೂ ಆಗಿರುವ ಎಚ್.ಡಿ.ಕುಮಾರಸ್ವಾಮಿಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರ ಸಮಾಧಾನಕ್ಕೆ ಹಾಗೂ ಸಾರ್ವಜನಿಕರಿಗೆ ಸಮಾನವಾಗಿ ಶಾಲೆ ಹಂಚಿಕೆ ಮಾಡಲು ಶಿಕ್ಷಣ ಇಲಾಖೆ ಪ್ರತಿ ಕ್ಷೇತ್ರಕ್ಕೆ 4 ಶಾಲೆ ಆಯ್ಕೆ ಮಾಡಲು ನಿರ್ಧರಿಸಿದೆ.
ಏನಿದು ಆಂಗ್ಲಶಾಲೆ?
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೂ ಒಂದೇ ಆವರಣದಲ್ಲಿ ಇರಲಿದೆ. ವಿದ್ಯಾರ್ಥಿಗಳು ಅರ್ಧಕ್ಕೆ ಶಾಲೆ ತೊರೆಯುವುದನ್ನು ತಪ್ಪಿಸುವ ಸಲುವಾಗಿ ಈ ರೀತಿ ಶಾಲೆ ತೆರೆಯಲು ನಿರ್ಧರಿಸಿದೆ.
ಒಂದು ಸಾವಿರ ಶಾಲೆಗಳ ಆಯ್ಕೆಗೆ ಸೂಚನೆ ನೀಡಲಾಗಿದೆ. ಆಂಗ್ಲ ಮಾಧ್ಯಮ ಬೋಧನಾ ಪಠ್ಯಕ್ರಮವನ್ನು ಪ್ರಾದೇಶಿಕ ಅಂಗ್ಲ ಕೇಂದ್ರ ರಚಿಸಲು ಮುಂದಾಗಿದೆ.
|ಪಿ.ಸಿ.ಜಾಫರ್, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…