Featured

ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರ ನೇಮಕ ಮಾಡುವ ಗುರಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – vishwanews24

ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರ ನೇಮಕ ಮಾಡುವ ಗುರಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಕಳೆದ ವರ್ಷದ 1.08 ಕೋಟಿ ಸದಸ್ಯರ ನೋಂದಣಿಯ ದಾಖಲೆ ಮೀರುವ ಮಹತ್ವಾಕಾಂಕ್ಷೆಯೊಂದಿಗೆ ಬಿಜೆಪಿಯ ರಾಜ್ಯ ಘಟಕವು ತನ್ನ ಸದಸ್ಯತ್ವ ಅಭಿಯಾನವನ್ನು ಬುಧವಾರ ಪ್ರಾರಂಭಿಸಿದೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರನ್ನು ನೇಮಕ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು. ನಾವು ಸಮಾಜದ ವಿವಿಧ ವರ್ಗಗಳ ಜನರನ್ನು ತಲುಪುತ್ತೇವೆ ಮತ್ತು ಅವರನ್ನು ಬಿಜೆಪಿ ತೆಕ್ಕೆಗೆ ತರುತ್ತೇವೆ. ಈ ಚಾಲನೆಯು ನಮ್ಮ ಹಿಂದಿನ ದಾಖಲೆಯನ್ನು ಮೀರಿಸುತ್ತೇವೆ, ಇದ ಜೊತೆಗೆ ಮಾಜಿ ಪ್ರಧಾನಿ ಎಬಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತದೆ. 2047ನೇ ಇಸವಿಗೆ ಭಾರತವನ್ನು ವಿಕಸಿತ ರಾಷ್ಟ್ರವಾಗಿ, ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಕನಸು ಮಾನ್ಯ ಪ್ರಧಾನಿಯವರದು. ಮೋದಿಜೀ ಅವರಿಗೆ ಇನ್ನೂ ಹೆಚ್ಚು ಬಲ ಕೊಡುವ ಕೆಲಸ ನಡೆಸಬೇಕಿದೆ ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‌ಗಳಲ್ಲಿ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ಹೇಳಿದರು.

ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಅವರಂತಹ ಹಿರಿಯ ನಾಯಕರ ಉಪಸ್ಥಿತಿಯಿಲ್ಲದೆ ಕಾಂಗ್ರೆಸ್ ನಾಯಕರು ಜಮೀನು ಪ್ರಕರಣದಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರ ಅನುಮತಿ ಕೇಳಿದ್ದು ಏಕೆ ಎಂದು ಪ್ರಶ್ನಿಸಿದರು. ಮುಡಾ ಆಯುಕ್ತರನ್ನು ಅಮಾನತುಗೊಳಿಸಿರುವುದು ನಿವೇಶನ ಹಂಚಿಕೆಗೆ ಸಂಬಂಧಿಸಿದ ಅಕ್ರಮಗಳಲ್ಲಿ ಸಿದ್ದರಾಮಯ್ಯನವರ ಕೈವಾಡವನ್ನು ಸೂಚಿಸುತ್ತದೆ ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎಂದರು. ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ವಿಜಯೇಂದ್ರ ಅವರು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚನ್ನಪಟ್ಟಣ, ಶಿಗ್ಗಾಂವ್ ಮತ್ತು ಸಂಡೂರು ಉಪಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿರವುದಾಗಿ ತಿಳಿಸಿದರು. ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣದಿಂದ ಸ್ಪರ್ಧಿಸಲು ಆಸಕ್ತಿ ತೋರಿದ್ದಾರೆ. “ನಾವು ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಕೇಂದ್ರ ನಾಯಕರಿಗೆ ಕಳುಹಿಸುತ್ತೇವೆ, ಅವರು ಪರಶೀಲಿಸಿ ಅಂತಿಮಗೊಳಿಸುತ್ತಾರೆ ಎಂದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago