ಮಂಗಳೂರು, : ”ಬುಧವಾರ ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು ಮಾಡಬೇಡಿ. ಅಯೋಧ್ಯೆಯಂತಹ ಸೂಕ್ಷ್ಮ ವಿಚಾರದಲ್ಲಿ ಯಾರ ಭಾವನೆಗೂ ಧಕ್ಕೆ ಉಂಟಾಗಬಾರದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
”ಎಲ್ಲಾ ಕಾರ್ಯಕರ್ತರು ಜವಾಬ್ದಾರಿಯಿಂದ ವರ್ತಿಸಬೇಕು. ಗುಂಪು ಸೇರಿ ಸಂಭ್ರಮಾಚರಣೆ ಮಾಡಬೇಡಿ, ಪ್ರತಿ ಮನೆಗಳಲ್ಲಿ ದೀಪ ಹಚ್ಚುವ ಮೂಲಕ ರಾಮಮಂದಿರದ ಭೂಮಿ ಪೂಜೆಯನ್ನು ಸಂಭ್ರಮಿಸಿ, ಬದಲಾಗಿ ಗುಂಪುಗೂಡಿ, ಪಟಾಕಿ ಸಿಡಿಸಬೇಡಿ. ದೇವಸ್ಥಾನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ದೀಪ ಬೆಳಗಿಸಿ” ಎಂದು ಮನವಿ ಮಾಡಿದ್ದಾರೆ.
”ಹಾಗೆಯೇ ಬುಧವಾರ ಬೆಳಿಗ್ಗೆ 8 ರಿಂದ 12 ರವರೆಗೆ ನಡೆಯಲಿರುವ ಈ ಕಾರ್ಯಕ್ರಮ ಟಿವಿಯಲ್ಲಿ ನೇರ ಪ್ರಸಾರವಾಗಲಿದೆ, ಸಾಮಾಜಿಕ ಜಾಲತಾಣದಲ್ಲೂ ಲೈವ್ ಇರಲಿದೆ. ಅದರ ಮೂಲಕ ಜನರು ವೀಕ್ಷಿಸಬಹುದು” ಎಂದು ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…