Featured

ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ ಅದನ್ನೆ ರಾಜಕೀಯ ಮಾಡಬಾರದು: ದಿನೇಶ್ ಗುಂಡೂರಾವ್ – vishwanews24

ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ ಅದನ್ನೆ ರಾಜಕೀಯ ಮಾಡಬಾರದು: ದಿನೇಶ್ ಗುಂಡೂರಾವ್

ಬೆಳಗಾವಿ: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾತನಾಡಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು.

ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ ಮರಣಗಳು ಆಗುತ್ತಿವೆ, ಅದಕ್ಕೆ ವೈದ್ಯಕೀಯ ಕಾರಣ ಎನ್ನಲಾಗದು. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಅವರು ವಿರೋಧ ಪಕ್ಷಗಳ ವಿರುದ್ದ ಕಿಡಿ ಕಾರಿದರು.

ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ ಎಂದರು. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು. ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ಬಹಳ ಚಿಂತೆ ಇದೆ. ಸರ್ಕಾರವೂ ಎಚ್ಚೆತ್ತುಕೊಂಡಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ, ಬಡವರು ಸರ್ಕಾರಿ ಆಸ್ಪತ್ರೆಗೆ ಬರಲು ಭಯ ಪಡುವಂತಾಗಿದೆ ಎಂಬ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಗೇನಿಲ್ಲ ಎಂದು ಸಮಜಾಯಿಷಿ ನೀಡಿದರು.

Vishwa News 24

Recent Posts

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

9 minutes ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

18 minutes ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

28 minutes ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

37 minutes ago

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

45 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

59 minutes ago