ಬೆಳಗಾವಿ: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾತನಾಡಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು.
ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ ಮರಣಗಳು ಆಗುತ್ತಿವೆ, ಅದಕ್ಕೆ ವೈದ್ಯಕೀಯ ಕಾರಣ ಎನ್ನಲಾಗದು. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಅವರು ವಿರೋಧ ಪಕ್ಷಗಳ ವಿರುದ್ದ ಕಿಡಿ ಕಾರಿದರು.
ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ ಎಂದರು. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು. ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ಬಹಳ ಚಿಂತೆ ಇದೆ. ಸರ್ಕಾರವೂ ಎಚ್ಚೆತ್ತುಕೊಂಡಿದೆ ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ, ಬಡವರು ಸರ್ಕಾರಿ ಆಸ್ಪತ್ರೆಗೆ ಬರಲು ಭಯ ಪಡುವಂತಾಗಿದೆ ಎಂಬ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಗೇನಿಲ್ಲ ಎಂದು ಸಮಜಾಯಿಷಿ ನೀಡಿದರು.
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…