Featured

ಪ್ರತೀ ಕುಟುಂಬಕ್ಕೆ ತಿಂಗಳಿಗೆ ಒಂದೇ ಗ್ಯಾಸ್ ಸಿಲಿಂಡರ್: ಸಚಿವ ಮುನಿಯಪ್ಪ – vishwanews24

ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು, ಶೇಖರಣೆ ಮಾಡಿದರೆ ಕಾನೂನು ಕ್ರಮ ..

ಯಾರಿಗೆ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಲಭಿಸುತ್ತದೆ..?

ಬೆಂಗಳೂರು : ಇರಾನ್- ಇಸ್ರೇಲ್, ಅಮೆರಿಕ ನಡುವೆ ಯುದ್ಧದ ಹಿನ್ನೆಲೆಯಲ್ಲಿ ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಅದೇರೀತಿ ಪ್ರತೀ ಕುಟುಂಬಕ್ಕೆ ತಿಂಗಳಿಗೆ ಒಂದೇ ಗ್ಯಾಸ್ ಸಿಲಿಂಡರ್ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಬುಧವಾರ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಕಾಂಗ್ರೆಸ್ ಸದಸ್ಯ ಡಾ.ರಂಗನಾಥ್ ಪ್ರಸ್ತಾಪಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಡುಗೆ ಅನಿಲ ಸಿಲಿಂಡರ್ ದೊರೆಯುವುದಿಲ್ಲ ಎಂದು ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಈಗಾಗಲೇ ಸಭೆ ನಡೆಸಲಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ ಎಂದರು.

ತೈಲ ಸರಬರಾಜು ಕಂಪೆನಿಗಳಾದ ಎಚ್.ಪಿ., ಇಂಡಿಯನ್ ಆಯಿಲ್, ಶೇಲ್ ಸೇರಿದಂತೆ ಇತರ ಕಂಪೆನಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಸಿಲಿಂಡರ್ ಸಮಸ್ಯೆಗೆ ಪರಿಹಾರ ಕಂಡು ಕಂಡುಕೊಳ್ಳಲಾಗಿದೆ. ಅದರಂತೆ, ಒಂದು ತಿಂಗಳಿಗೆ ಒಂದು ಕುಟುಂಬಕ್ಕೆ ಒಂದು ಸಿಲಿಂಡರ್ ಕೊಡಲು ತೀರ್ಮಾನ ಮಾಡಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ :

ಅದೇ ರೀತಿ, ವಾಣಿಜ್ಯ ಬಳಕೆ ಸಿಲಿಂಡರ್ ಗಳ ಮೇಲೆ ಕೊಂಚ ಮಟ್ಟಿಗೆ ನಿಯಂತ್ರಣ ಹೇರಲಾಗಿದ್ದು, ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಹಾಗೂ ಇತರ ಅನಗತ್ಯ ಬಳಕೆಗೆ ಕಡಿವಾಣ ಹಾಕಲಾಗಿದೆ. ಇದು ತಾತ್ಕಾಲಿಕ ನಿರ್ಬಂಧವೇ ಆಗಿದೆ ಎಂದು ಅವರು ತಿಳಿಸಿದರು.

ಇಲ್ಲಿಯವರೆಗೂ ಎಲ್ಲೂ ಗ್ಯಾಸ್ ಸಿಲಿಂಡರ್ ಸರಬರಾಜಿನಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ಯಾವ ದೇಶದಿಂದಲೂ ಗ್ಯಾಸ್ ಸರಬರಾಜು ಆಗಿಲ್ಲವೆಂದರೂ, ನಾವು ಕನಿಷ್ಠ ಶೇಕಡಾವಾರು 20ರಿಂದ 30ರಷ್ಟು ಸ್ವಂತವಾಗಿಯೇ ಅನಿಲ ಉತ್ಪಾದನೆ ಮಾಡಬಹುದು. ಈ ಪ್ರಮಾಣದಲ್ಲಿಯೇ ನಾವು ಅಡುಗೆ ಅನಿಲ ಗ್ಯಾಸ್ ಬಳಕೆ ಮಾಡಬಹುದಾಗಿದೆ. ಹೀಗಾಗಿ ಗ್ರಾಹಕರು ಆತಂಕಕ್ಕೆ ಒಳಗಾಗಿ ಮುಂಗಡವಾಗಿ ಕಾಯ್ದಿರಿಸುವಿಕೆ ಪ್ರಕ್ರಿಯೆ ಮಾಡಬಾರದು ಎಂದು ಸಚಿವರು ವಿವರಿಸಿದರು.

ಶೇಕಡಾ 70ರಷ್ಟು ಅನಿಲ ವಿದೇಶದಿಂದ ಬರಬೇಕು.ಆದರೆ, ಇರಾನ್ ಜಲ ಮಾರ್ಗದಲ್ಲಿ ತಡೆ ಹಾಕಿರುವ ಕಾರಣ ಸೂಕ್ತ ಸಮಯಕ್ಕೆ ಅನಿಲ ಮತ್ತು ಕಚ್ಚ ತೈಲವು ಭಾರತಕ್ಕೆ ಬರುತ್ತಿಲ್ಲ ಎಂದ ಅವರು, ಇದು ಯುದ್ಧದ ಸಮಯ. ಆದ ಕಾರಣ, ಗ್ಯಾಸ್ ವ್ಯರ್ಥ ಮಾಡಬೇಡಿ ಎಲ್ಲರು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಇದನ್ನೂ ಓದಿ :

ಶೇಖರಣೆ ಮಾಡಿದರೆ ಕೇಸ್..

ಗ್ಯಾಸ್ ಬೇಡಿಕೆ ಹೆಚ್ಚಿರುವ ನೆಪ ಇಟ್ಟುಕೊಂಡು ಅಕ್ರಮವಾಗಿ ಅಡುಗೆ ಅನಿಲ ಅಥವಾ ವಾಣಿಜ್ಯ ಬಳಕೆಯ ಸಿಲಿಂಡರ್ ಯಾರಾದರೂ ಅಕ್ರಮವಾಗಿ ದಾಸ್ತಾನು, ಶೇಖರಣೆ ಮಾಡಿದರೆ ಮುಲಾಜಿಲ್ಲದೆ, ಕಾನೂನು ರೀತ್ಯಾ ಕೇಸ್ ಹಾಕುತ್ತೇವೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಾಕೀತು ಮಾಡಿದ್ದಾರೆ.

ಯಾರಿಗೆ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಲಭಿಸುತ್ತದೆ?

*ಶಾಲಾ ಕಾಲೇಜು

* ಆಸ್ಪತ್ರೆ

*ಸರಕಾರ ನಿಗದಿತ ಸ್ಥಳ ಅಥವಾ ತುರ್ತು ಸೇವೆ

ವಾಣಿಜ್ಯ ಬಳಕೆಗೆ ಗ್ಯಾಸ್ ಎಲ್ಲಿ ನಿಷೇಧ?

* ಹೋಟೆಲ್ ಮತ್ತು ರೆಸ್ಟೋರೆಂಟ್

* ಕಲ್ಯಾಣ ಮಂಟಪ

ವಾರಕ್ಕೊಮ್ಮೆ ಸಿಲಿಂಡರ್ ಕುರಿತು ಸಭೆ.

ಸದ್ಯ ಸಿಲಿಂಡರ್ ಬಳಕೆ ಮಾರ್ಗ ಸೂಚಿ ಮತ್ತು ಇತರೆ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ವಾರಕ್ಕೊಮ್ಮೆ ಸಭೆ ನಡೆಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಇದನ್ನೂ ಓದಿ :

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

20 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago